Advertisement

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

09:31 AM Oct 28, 2021 | Team Udayavani |

ಮುಂಬೈ: ಸಾರಾಯಿ ಕುಡಿಯಲು 10 ರೂ. ಕೊಡಲು ನಿರಾಕರಿಸಿದ ವ್ಯಕ್ತಿಯನ್ನು ಆತನ ಇಬ್ಬರು ಸ್ನೇಹಿತರು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು 50 ವರ್ಷದ ಭಗವತ್ ಸೀತಾರಾಮ್ ಎಂದು ಗುರುತಿಸಲಾಗಿದೆ. ಆತನ ಆರೋಪಿ ಸ್ನೇಹಿತರಾದ 40 ವರ್ಷದ ವಿನೋದ್ ಲಕ್ಷ್ಮಣ್ ವಾಂಖೆಡೆ ಮತ್ತು 35 ವರ್ಷದ ದಿಲೀಪ್ ತ್ರ್ಯಂಬಕ್ ಬೊಡ್ಡೆ ಕೊಲೆಗೈದ ಆರೋಪಿಗಳು.

ಮೂವರು ಸ್ನೇಹಿತರು ಒಟ್ಟಿಗೆ ಮದ್ಯದಂಗಡಿಗೆ ಕುಡಿಯಲು ಹೋಗಿದ್ದರು. ಈ ವೇಳೆ ವಿನೋದ್ ಲಕ್ಷ್ಮಣ್ ವಾಂಖೆಡೆ ಮತ್ತು ದಿಲೀಪ್ ತ್ರ್ಯಂಬಕ್ ಮದ್ಯ ಕುಡಿಯಲು ಸೀತಾರಾಮ್ ನಿಂದ 10 ರೂ. ಕೇಳಿದ್ದಾರೆ. ಆದರೆ ಸೀತಾರಾಂ ಅವರಿಗೆ ಹಣ ನೀಡಲು ನಿರಾಕರಿಸಿದ್ದಾನೆ. ಬಳಿಕ ಸೀತಾರಾಮ್ ಅಂಗಡಿಯಿಂದ ಹೊರಗೆ ಹೋಗುತ್ತಿದ್ದಾಗ ಆರೋಪಿಗಳು ಮರದ ದೊಣ್ಣೆಯಿಂದ ಆತನ ತಲೆಗೆ ಹಿಂದಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಭಗವತ್ ಸೀತಾರಾಮ್ ತಲೆಗೆ ಪೆಟ್ಟಾಗಿ ಕೆಳಗೆ ಬಿದ್ದು ಕೊನೆಯುಸಿರೆಳೆದರು.

ಇದನ್ನೂ ಓದಿ:ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಘಟನೆ ನಡೆದ ಒಂದು ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸೀತಾರಾಮ್ ದೇಹವು ರಕ್ತದ ಮಡುವಿನಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪೊಲೀಸ್ ಅಧಿಕಾರಿ ಪ್ರಲ್ಹಾದ್ ಕಾಟ್ಕರ್ ಮಾತನಾಡಿ, ಮದ್ಯದಂಗಡಿಯಲ್ಲಿ ವ್ಯಕ್ತಿಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುವ ಬಗ್ಗೆ ದೂರವಾಣಿ ಕರೆ ಮಾಡಿ ಮಾಹಿತಿ ಬಂದಿದ್ದು, ನಾವು ಸ್ಥಳಕ್ಕಾಗಮಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು. ಒಂದು ಗಂಟೆಯೊಳಗೆ ಹಂತಕರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next