Advertisement

ಮಳೆಗಾಗಿ ಪ್ರಾರ್ಥಿಸಿ ಕಪ್ಪೆ ಮದುವೆ

03:14 PM Jun 10, 2019 | Team Udayavani |

ಗಂಗಾವತಿ: ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ರವಿವಾರ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡುವ ಮೂಲಕ ಗ್ರಾಮದಲ್ಲಿರುವ ದೇವಾಲಯಗಳಿಗೆ ಜಲಾಭಿಷೇಕ ಕಾರ್ಯಕ್ರಮ ಜರುಗಿತು.

Advertisement

ಎರಡು ಕಪ್ಪೆಗಳನ್ನು ತಂದು ಅರಿಶಿಣ ಕುಂಕುಮ ಲೇಪಿಸಿ ಪೂಜೆ ಮಾಡಲಾಗುತ್ತದೆ. ಗಂಡು ಹಾಗೂ ಹೆಣ್ಣಿನ ವೇಷ ಧರಿಸಿದ ಇಬ್ಬರು ಯುವಕರು ಎರಡು ಕಪ್ಪೆಗಳನ್ನು ತಲೆ ಮೇಲೆ ಹೊತ್ತುಕೊಂಡು ಇಡೀ ಗ್ರಾಮವನ್ನು ಪ್ರದಕ್ಷಿಣೆ ಹಾಕುತ್ತಾರೆ. ಕಪ್ಪೆ ಅಥವಾ ಕತ್ತೆಗಳನ್ನು ಮದುವೆ ಮಾಡಿದರೆ ಮಳೆ ಆಗುತ್ತದೆ ಎಂಬ ನಂಬಿಕೆ ಇರುವುದರಿಂದ ಗ್ರಾಮೀಣ ಭಾಗದಲ್ಲಿ ಈ ಇಂತಹ ಆಚರಣೆಗಳು ಸಾಮಾನ್ಯವಾಗಿವೆ.

ಇದುವರೆಗೂ ಗಂಗಾವತಿ ತಾಲೂಕಿನಲ್ಲಿ ವಾಡಿಯಂತೆ ಮಳೆ ಆಗಿಲ್ಲ. ರೈತರು ಬಿತ್ತನೆ ಮಾಡಲು ತಮ್ಮ ಭೂಮಿಯನ್ನು ಹದಗೊಳಿಸಿ ಮಳೆಗಾಗಿ ಕಾಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next