Advertisement

ಅ.1ರಿಂದ ಪಲಿಮಾರು ಶ್ರೀಗಳು ಪೇಜಾವರ ಮಠದಲ್ಲಿ  ಮೊಕ್ಕಾಂ

04:14 PM Sep 28, 2017 | |

ಮುಂಬಯಿ: 2018-2020ರ ಉಡುಪಿ ಪರ್ಯಾಯ ಪೀಠವನ್ನೇರಲಿರುವ ಪರ್ಯಾಯ ಸಂಚಾರಕ್ಕೆ ಮುಂಬಯಿ ಮಹಾನಗರಕ್ಕಾಗಮಿಸಿರುವ ಉಡುಪಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಅ. 1ರಿಂದ ಅ. 3ರವರೆಗೆ ಸಾಂತಾಕ್ರೂಜ್‌ ಪೂರ್ವದ ಪ್ರಭಾತ್‌ ಕಾಲೋನಿಯ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಠದ ಶಾಖೆಯ ಪ್ರಬಂಧಕ ರಾಮದಾಸ ಉಪಾಧ್ಯಾಯ ರೆಂಜಾಳ ತಿಳಿಸಿದ್ದಾರೆ.

Advertisement

ಅ. 1ರಂದು  ಪೂರ್ವಾಹ್ನ 11ರಿಂದ ಮಧ್ಯಾಹ್ನ 12 ರವರೆಗೆ   ತಪ್ತ ಮುದ್ರಾಧಾರಣಾ ಕಾರ್ಯಕ್ರಮವನ್ನು ಶ್ರೀಗಳು ನಡೆಸಿಕೊಡಲಿದ್ದಾರೆ. ಅ. 2ರಂದು ಮತ್ತು ಅ.3ರಂದು ಕೂಡ ದಿನಪೂರ್ತಿಯಾಗಿ ಇಲ್ಲಿದ್ದು ವಿವಿಧ ಪೂಜೆಗಳನ್ನು ನಡೆಸಿ ನೆರೆದ ಭಕ್ತಾಭಿಮಾನಿಗಳಿಗೆ ಮಂತ್ರಾಕ್ಷತೆ ನೀಡಿ ಅನುಗ್ರಹಿಸಲಿದ್ದಾರೆ. ಶ್ರೀಗಳ 3 ದಿನಗಳ ಎಲ್ಲಾ ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ನಾಡಿನ ಸಮಸ್ತ ಭಕ್ತಾಭಿಮಾನಿಗಳು ಸಹಭಾಗಿ ಗಳಾಗಿ ಶ್ರೀ ಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣ
ಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ತ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್‌ ಮತ್ತು ನಿರಂಜನ್‌ ಗೋಗೆr  ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next