Advertisement

ಜ.2 ರಿಂದ 12 ರವರೆಗೆ ಬೂತ್ ವಿಜಯ ಅಭಿಯಾನ: ಸುದರ್ಶನ ಮೂಡುಬಿದಿರೆ

05:23 PM Dec 31, 2022 | Team Udayavani |

ಮಹಾನಗರ:ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಸಲುವಾಗಿ ಜನವರಿ 2 ರಿಂದ 12ರವರೆಗೆ ಬೂತ್ ವಿಜಯ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.

Advertisement

ಮಂಗಳೂರಿನ ಅಟಲ್ ಸೇವಾ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ವೇಳೆ ಜಿಲ್ಲೆಯ ೧೮೬೧ ಬೂತ್‌ಗಳಲ್ಲಿ ಸಭೆ ನಡೆಸಲಾಗುವುದು ಎಂದರು.

ಜ. 2 ರಂದು ಬೆಳಗ್ಗೆ 10 ಗಂಟೆಗೆ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಭಿಯಾನದ ಉದ್ಘಾಟನೆಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೆರವೇರಿಸಲಿದ್ದಾರೆ.

ಅಭಿಯಾನದ ಯಶಸ್ಸಿಗೆ ಈಗಾಗಲೇ ಕೆಲಸ ಕಾರ್ಯ ಆರಂಭಗೊಂಡಿದೆ. ಬೂತ್ ಕಾರ್ಯಕರ್ತರು ಹಾಗೂ ಸಂಘಟನ ಶಕ್ತಿಯ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಽಕಾರಕ್ಕೆ ಬರಲಿದೆ ಎಂದವರು ಹೇಳಿದರು.

ಸಿದ್ಧರಾಮಯ್ಯನವರು ವಿದೂಷಕ ಎಂದ ಕೂಡಲೆ ಪಕ್ಷದ ರಾಜ್ಯಾಧ್ಯಕ್ಷ ವಿದೂಷಕರಾಗುವುದಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ರನ್ನು ಮುಕ್ತ ಕಂಠದಿಂದ ಶ್ಲಾಸಿದ್ದಾರೆ. ರಾಜ್ಯವ್ಯಾಪಿ ಪಕ್ಷದ ಸಂಘಟನೆಗೆ ಅತೀ ಹೆಚ್ಚು ಸಮಯ ನೀಡಿರುವವರು ರಾಜ್ಯಾಧ್ಯಕ್ಷರು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸುದರ್ಶನ ಮೂಡುಬಿದಿರೆ ಉತ್ತರಿಸಿದರು.

Advertisement

ಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮುಖಂಡರಾದ ಕಸ್ತೂರಿ ಪಂಜ, ಜಗದೀಶ ಶೇಣವ, ರವಿಶಂಕರ ಮಿಜಾರು, ವಿಜಯ ಕುಮಾರ್ ಶೆಟ್ಟಿ, ರಣದೀಪ್ ಕಾಂಚನ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next