Advertisement

ರಾಮನಗರದಿಂದಲೇ ಕಣಕ್ಕೆ: ಕುಮಾರಸ್ವಾಮಿ

02:23 PM May 29, 2017 | Team Udayavani |

ಮಂಡ್ಯ: “ಮುಂದಿನ ಚುನಾವಣೆಯಲ್ಲಿ ನಾನು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ರಾಮನಗರದಿಂದಲೇ ನನ್ನ ಸ್ಪರ್ಧೆ ಖಚಿತ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Advertisement

ರಾಮನಗರದಲ್ಲಿ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿಯುವುದಿಲ್ಲ. ಉತ್ತರ ಕರ್ನಾಟಕದಿಂದಲೂ ಸ್ಪರ್ಧೆ
ಮಾಡುವಂತೆ ಒತ್ತಡವಿದೆ. ಈ ವಿಷಯವಾಗಿ ಸಮಯ ಬಂದಾಗ ಸೂಕ್ತ ನಿರ್ಧಾರ ಪ್ರಕಟಿಸುತ್ತೇನೆ ಎಂದು
ಸುದ್ದಿಗಾರರಿಗೆ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಮ್ಮ ಪಕ್ಷದಲ್ಲಿ ಅಭ್ಯರ್ಥಿಯಾಗಲು ಎಲ್ಲಾ ಕಡೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಎಲ್ಲರಿಗೂ ಟಿಕೆಟ್‌ ಕೊಡಲಾಗುವುದಿಲ್ಲ. ಆದರೆ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಭಿನ್ನಾಭಿಪ್ರಾಯಗಳನ್ನು ದೂರಸರಿಸಿ ಸಮಾಧಾನಪಡಿಸುವ ಕಾರ್ಯದಲ್ಲಿ ತೊಡಗಿದ್ದೇನೆ. ಟಿಕೆಟ್‌ ಆಕಾಂಕ್ಷಿಗಳಲ್ಲಿ ಗೊಂದಲವಿದೆಯಷ್ಟೇ ಬಂಡಾಯಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ. ಪಕ್ಷದೊಳಗೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವೆಲ್ಲವೂ ಬಗೆಹರಿಸಲಾಗದಷ್ಟು ಕ್ಲಿಷ್ಟಕರವೇನಲ್ಲ. ಸದ್ಯದಲ್ಲೇ ಅದೆಲ್ಲವನ್ನೂ ತೀರ್ಮಾನ ಮಾಡಲಾಗುವುದು. ಜಿ.ಟಿ.ದೇವೇಗೌಡರು ಪಕ್ಷದಲ್ಲಿ ಸರಿಯಾಗೇ ಇದ್ದಾರೆ. ಮುಂದೆ ಅವರು ಸರಿಹೋಗುತ್ತಾರೆ ಎಂದು ಚುಟುಕಾಗಿ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next