Advertisement

ಇಂದಿನಿಂದ ಆರೆಸ್ಸೆಸ್‌ ಪೂರ್ವತಯಾರಿ ಸಭೆ

12:30 AM Jan 06, 2019 | Team Udayavani |

ಚೆನ್ನೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ 30 ಪರಿವಾರ ಸಂಘಟನೆಗಳೊಂದಿಗೆ ನಾಲ್ಕು ದಿನಗಳ ಪೂರ್ವ ತಯಾರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದಿರುವ ಈ ಕಾರ್ಯಕ್ರಮ ತಮಿಳುನಾಡಿನ ಚೆನ್ನೈನಲ್ಲಿ ಭಾನು ವಾರದಂದು ಆರಂಭವಾಗಲಿದ್ದು, ವಿಶ್ವಹಿಂದೂ ಪರಿಷತ್‌, ಬಿಜೆಪಿ ಸೇರಿದಂತೆ ಹಲವು ಪಕ್ಷ, ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ. ಇವುಗಳ ಸಂಘಟನೆ ಸಂಬಂಧಿ ವಿಚಾರಗಳನ್ನು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.

Advertisement

ಈ ಸಭೆಯಲ್ಲಿ ಅಯೋಧ್ಯೆ ರಾಮ ಮಂದಿರ ವಿಚಾರವೂ ಪ್ರಸ್ತಾಪವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯ ಇತ್ತೀಚೆಗಿನ ಹೇಳಿಕೆಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದೇ ವೇಳೆ, ಇತ್ತೀಚೆಗೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡದಲ್ಲಿ ಬಿಜೆಪಿ ಸೋಲುಂಡಿರುವ ವಿಚಾರ ಕುರಿತು ವಿಮರ್ಶೆ ನಡೆಯಲಿದೆ. ಆದರೆ ಇದು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಭೆ ಅಲ್ಲ. ಎಲ್ಲ ಸಂಘ ಟನೆಗಳೂ ತಮ್ಮದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರವಾಗಿವೆ ಎಂದು ಆರೆಸ್ಸೆಸ್‌ ವಕ್ತಾರರು ತಿಳಿಸಿದ್ದಾರೆ. ಸಭೆಯನ್ನುದ್ದೇಶಿಸಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ ಭಾಗತ್‌ ಮಾತನಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next