Advertisement
ಬೆಂಗಳೂರಿನಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್, ದೇಶಾದ್ಯಂತ ನಿತ್ಯ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದ್ದಂತೆ ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿ ಜನ ವಿರೋಧಿ ಸರಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರದ ಅದಕ್ಷತೆ ಮತ್ತು ಭ್ರಷ್ಟಾಚಾರಕ್ಕೆ ಕರ್ನಾಟಕದ ಜನರೇಕೆ ಹೆಚ್ಚಿನ ಮೊತ್ತ ಪಾವತಿಸ ಬೇಕು ಎಂದು ಟ್ವೀಟ್ ಮಾಡಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯ ಸರಕಾರದ ವಿವಿಧ ಯೋಜನೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಪ್ರಮಾಣದಲ್ಲಿ ಹೆಚ್ಚಿಸಿ ಸೆಸ್ ಸಂಗ್ರಹಿಸಲಾಗುತ್ತಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಿದೆ ಎಂದರು. ಸಾರಿಗೆ ಸಂಸ್ಥೆಗಳ ಮೇಲೆ ಸಾಲದ ಹೊರೆ ಹೆಚ್ಚಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಸಾರಿಗೆ ದರ ಹೆಚ್ಚಿಸುವಂತೆ ಇಲಾಖೆಯಿಂದ ಆರು ತಿಂಗಳ ಹಿಂದೆಯೇ ಪ್ರಸ್ತಾವನೆ ಬಂದಿದೆ ಎಂದಿದ್ದಾರೆ.