Advertisement

ಬೆಂಗಳೂರು: ಕೆಲವು ದಿನಗಳಿಂದ ನಡೆಸುತ್ತಿರುವ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಅವರು ಮುಂದಿಟ್ಟಿರುವ 9 ಬೇಡಿಕೆಗಳ ಪೈಕಿ ಐದನ್ನು ಈಡೇರಿಸಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಆದರೆ, ಪ್ರಮುಖ ಬೇಡಿಕೆಯಾಗಿರುವ ವೇತನ ಪರಿಷ್ಕರಣೆ ಇನ್ನೂ ಬಾಕಿ ಇದೆ.

Advertisement

“ಕೋವಿಡ್‌-19’ನಿಂದ ಸಾವ ನ್ನಪ್ಪಿದ ನೌಕರರ ಕುಟುಂಬಗಳಿಗೆ ಸರಕಾರಿ ನೌಕರರಿಗೆ ನೀಡು ವಂತೆ ಸಂಸ್ಥೆಯ ಆಂತರಿಕ ಸಂಪ ನ್ಮೂಲಗಳಿಂದ ತಲಾ 30 ಲ. ರೂ. ಪರಿಹಾರವನ್ನು ನೀಡುವುದು, ಸಾರಿಗೆ ನಿಗಮಗಳಲ್ಲಿ ಮಾನವ ಸಂಪನ್ಮೂಲ ನಿರ್ವಹಣೆಗೆ ಎಚ್‌ಆರ್‌ಎಂಎಸ್‌ ವ್ಯವಸ್ಥೆ ಜಾರಿಗೊಳಿಸುವುದು,  ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆ ರೂಪಿಸುವುದು, ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಸ್ವಾಯತ್ತ ಅನುದಾನಿತ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ಹಾಗೂ “ನಾಟ್‌ ಇಶ್ಯೂಡ್‌ ನಾಟ್‌ ಕಲೆಕ್ಟೆಡ್‌’ ವ್ಯವಸ್ಥೆಗೆ ಪರ್ಯಾಯ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಒಟ್ಟಾರೆ ಹತ್ತು ಬೇಡಿಕೆಗಳನ್ನು ಮುಂದಿಟ್ಟು ನೌಕರರು ಕಳೆದ ಡಿಸೆಂಬರ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದರು. ಪರಿಣಾಮ ನಾಲ್ಕು ದಿನಗಳ ಕಾಲ ಬಸ್‌ ಸೇವೆ ಸ್ಥಗಿತಗೊಂಡಿತ್ತು. ಅಂತಿಮವಾಗಿ  ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎನ್ನುವ ಪ್ರಮುಖ ಬೇಡಿಕೆ ಹೊರತುಪಡಿಸಿ, ಉಳಿದವುಗಳ ಈಡೇರಿಕೆಗೆ ಸರಕಾರ ಸಮ್ಮತಿಸಿತ್ತು. ಈ ಪೈಕಿ ಬೇಡಿಕೆ  ಈಡೇರಿವೆ. ಉಳಿದಂತೆ 6ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಎರಡು ಸುತ್ತಿನ ಮಾತುಕತೆ ನಡೆದಿದೆ. ಈ ಶಿಫಾರಸು ಜಾರಿಯಿಂದ ಆಗಬಹುದಾದ ಸಾಧಕ-ಬಾಧಕಗಳ ಕುರಿತು ಸಮಿತಿ ಅಧ್ಯಯನ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಲಿದ್ದು,  ಅನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next