Advertisement

ಹರ್ಷ ಹತ್ಯೆಯ ಸಂಪೂರ್ಣ ವಿವರ ಕೊಡಲು ಸಾಧ್ಯವಿಲ್ಲ; ಆರಗ ಜ್ಞಾನೇಂದ್ರ

02:29 PM Feb 24, 2022 | Team Udayavani |

ಬೆಂಗಳೂರು: ಹರ್ಷ ಕೊಲೆ ಪ್ರಕರಣ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಇದುವರೆಗಿನ ಎಲ್ಲ ಬೆಳವಣಿಗೆ ಬಗ್ಗೆ ವಿವರಣೆ ನೀಡಿದ್ದಾರೆ.

Advertisement

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹರ್ಷನ ಹತ್ಯೆ ವಿಚಾರವಾಗಿ ಸಂಪೂರ್ಣವಾಗಿ ವಿವರ ಕೊಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರನ್ನು ಆರಗ ಜ್ಞಾನೇಂದ್ರ ಅವರು ಆರ್‌ಟಿ ನಗರ ನಿವಾಸದಲ್ಲಿ ಭೇಟಿಯಾಗಿದ್ದು, ಶಿವಮೊಗ್ಗದ ಸದ್ಯದ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ : ಇಡೀ ಶಿವಮೊಗ್ಗ ನಗರಕ್ಕೆ ಡ್ರೋಣ್‌ ಕಣ್ಗಾವಲು : 4 ತಂಡಗಳ ಮೂಲಕ 7 ಕ್ಯಾಮೆರಾ ಕಾರ್ಯನಿರ್ವಹಣೆ

ಈ ವೇಳೆ ಶಿವಮೊಗ್ಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಳೆದ ಎರಡು ದಿನಗಳಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ.  ಹರ್ಷ ಕೊಲೆ ತನಿಖೆ ಪ್ರಗತಿ ಬಗ್ಗೆ ಬೊಮ್ಮಾಯಿ ಅವರಿಗೆ ಆರಗ ಅವರು ವಿಸ್ತ್ರತ ವಿವರಣೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next