Advertisement

ಕುಡಿಯುವ ನೀರಿಗೆ ಪ್ರತೀ ಜಿಲ್ಲೆಗೆ ಹಣ: ಕೃಷ್ಣ ಬೈರೇಗೌಡ

09:23 PM Jul 06, 2023 | Team Udayavani |

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಕುಡಿಯುವ ನೀರಿನ ಕೊರತೆ ನೀಗಿಸಲು ಪ್ರತೀ ಜಿಲ್ಲೆಗೆ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Advertisement

ವಿಧಾನಸಭೆ ಕಲಾಪದಲ್ಲಿ ಗುರುವಾರ ಶೂನ್ಯ ವೇಳೆ ಕಾಂಗ್ರೆಸ್‌ನ ಅಲ್ಲಮಪ್ರಭು ಪಾಟೀಲ್‌ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಚಿಂತಿಸುವ ಅಗತ್ಯವಿಲ್ಲ ಎಂದರು.

ಇದಕ್ಕೆ ಆಕ್ಷೇಪವೆತ್ತಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸರಕಾರ ಹವಾಮಾನ ಇಲಾಖೆಯ ಮಾಹಿತಿ ನಂಬಿ ಯೋಜನೆ ರೂಪಿಸಬೇಡಿ. ಪ್ರತೀ ತಾಲೂಕಿಗೆ 50 ಲಕ್ಷ ರೂ. ಶೀಘ್ರ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಇದೆ. ರಾಜ್ಯದ ಒಟ್ಟು 193 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 339 ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಕೆಯಾಗುತ್ತಿದೆ. ಒಟ್ಟಿನಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬರಗಾಲ ಘೋಷಣೆ ಕುರಿತು ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಕೂಡ ಇದೇ ವೇಳೆ ಕೃಷ್ಣ ಬೈರೇಗೌಡ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next