Advertisement

143 ಯೋಜನೆಗಳಿಗೆ ಧನಸಹಾಯ

12:05 PM Oct 17, 2017 | |

ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನದ ದಾರ್ಶನಿಕ ಸಮೂಹ ಕಾರ್ಯ ಚಟುವಟಿಕೆಗಳಿಗೆ 2016-17ನೇ ಸಾಲಿನ ಆಯವ್ಯಯದಲ್ಲಿ 17 ಕೋಟಿ ರೂ.ನೀಡಲಾಗಿದ್ದು, ರಾಜ್ಯಾದ್ಯಂತ 143 ಯೋಜನೆಗಳಿಗೆ ಧನಸಹಾಯ ನೀಡಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಯೋಜನಾ ಸಚಿವ ಎಂ.ಆರ್‌. ಸೀತಾರಾಂ ತಿಳಿಸಿದರು.

Advertisement

ದಾರ್ಶನಿಕ ಸಮೂಹದ ಚಟುವಟಿಕೆಗಳಿಗಾಗಿ ರಾಜ್ಯದ ವಿವಿಧ ಭಾಗಗಳಿಂದ 1,260 ಪ್ರಸ್ತಾವನೆಗಳು ಬಂದಿದ್ದವು. ಅವುಗಳನ್ನು ತಜ್ಞ ವಿಜ್ಞಾನಿಗಳು ಪರಿಶೀಲನೆ ನಡೆಸಿ, 143 ಯೋಜನೆಗಳನ್ನು ಅಂತಿಮಗೊಳಿಸಿದ್ದಾರೆ. ಅವುಗಳಿಗೆ ಏಳು ವಿಭಾಗಗಳಲ್ಲಿ ಧನಸಹಾಯ ನೀಡಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿವಿಧ ಯೋಜನೆಗಳಿಗೆ ಮೊದಲ ಹಂತದಲ್ಲಿ 10 ಕೋಟಿ ರೂ. ಹಾಗೂ ಎರಡನೇ ಹಂತದಲ್ಲಿ 6 ಕೋಟಿ, ಮೂರನೇ ಹಂತದಲ್ಲಿ 1 ಕೋಟಿ ಬಿಡುಗಡೆ ಆಗಲಿದೆ ಎಂದರು. ಈ ಪೈಕಿ ವಿಜ್ಞಾನ, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯದ ಶ್ರೇಷ್ಠ ಕೇಂದ್ರಗಳ ಸ್ಥಾಪನೆಗೆ 1.80 ಕೋಟಿ, ವಿಜ್ಞಾನ ಶಿಕ್ಷಣದ ಸೃಜನಶೀಲ ಕೇಂದ್ರಗಳ ಸ್ಥಾಪನೆಗೆ 2.40 ಕೋಟಿ, ಯುವ ವಿಜ್ಞಾನಿಗಳಿಗೆ ಸಂಶೋಧನೆಗಾಗಿ ಮೂಲಧನ 2 ಕೋಟಿ, ಶ್ರೇಷ್ಠ ಸಂಶೋಧನಾ ಪ್ರಬಂಧಗಳಿಗೆ ಪ್ರಶಸ್ತಿಗೆ 5 ಲಕ್ಷ ರೂ.,
ಎಂಜಿನಿಯರಿಂಗ್‌ ಕಾಲೇಜುಗಳ ಬೋಧಕರಿಗೆ ತರಬೇತಿ ಕಾರ್ಯಾಗಾರಗಳಿಗೆ 30 ಲಕ್ಷ, ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರತಿಭಾವಂತ ಶಿಕ್ಷಕರ ಸಂಶೋಧನಾ ನಿಧಿಗೆ 1 ಕೋಟಿ, ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ 11 ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next