Advertisement

ಅಲ್ಪಸಂಖ್ಯಾಕ ವಿದ್ಯಾರ್ಥಿ ವೇತನಕ್ಕೆ ಹಣ: ಕೇಂದ್ರಕ್ಕೆ ಮನವಿ

09:03 PM Feb 23, 2023 | Team Udayavani |

ಬೆಂಗಳೂರು: ಅಲ್ಪಸಂಖ್ಯಾಕ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ಪೂರ್ವ ಸ್ಕಾಲರ್‌ಶಿಪ್‌ಗೆ ಈ ವರ್ಷವೂ ಹಣ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ನಸೀರ್‌ ಅಹ್ಮದ್‌ ಪ್ರಶ್ನೆಗೆ ಉತ್ತರಿಸಿ, ಆರ್‌ಟಿಇ ಕಾಯ್ದೆ ಬಂದ ಮೇಲೆ ಶಿಕ್ಷಣ ಉಚಿತವಾಗಿದೆ. ಆದ್ದರಿಂದ ಕೇಂದ್ರ ಸರಕಾರ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ನಿಲ್ಲಿಸಿದೆ. ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ವೇತನ ನಿಲ್ಲಿಸಲಾಗಿಲ್ಲ. ಈ ವರ್ಷವೂ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಣ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಸರಕಾರ ಒಪ್ಪಬಹುದು ಎಂಬ ವಿಶ್ವಾಸವಿದೆ ಎಂದರು.

2022-23ನೇ ಸಾಲಿನಲ್ಲಿ ರಾಜ್ಯ ಸರಕಾರದಿಂದ ಅಲ್ಪಸಂಖ್ಯಾಕ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 67 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಇದರಲ್ಲಿ 63 ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದೆ. 1,34,510 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮುಖಾಂತರ ಪಾವತಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next