Advertisement

ಗೋಪಾಲ ಭಂಡಾರಿ ಅಂತ್ಯಕ್ರಿಯೆ

09:56 AM Jul 06, 2019 | keerthan |

ಹೆಬ್ರಿ: ಸರಳ ಸಜ್ಜನಿಕೆಯ ರಾಜಕಾರಣಿ ಕಾರ್ಕಳದ ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಶುಕ್ರವಾರ ಅಪರಾಹ್ನ ಹುಟ್ಟೂರು ಹೆಬ್ರಿಯ ನಿವಾಸದ ಬಳಿ ನಡೆಯಿತು.

Advertisement

ಪಾರ್ಥಿವ ಶರೀರವನ್ನು ಬೆಳಗ್ಗೆ 10ಕ್ಕೆ ಮಂಗಳೂರಿನಿಂದ ಕಾರ್ಕಳಕ್ಕೆ ತಂದು 12 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು. ಬಳಿಕ ಕಾರ್ಕಳದಿಂದ ಹೆಬ್ರಿಗೆ ಕೊಂಡೊಯ್ಯಲಾಯಿತು. ದಾರಿಯುದ್ದಕ್ಕೂ ಸಹಸ್ರಾರು ಅಭಿಮಾನಿಗಳು ದರ್ಶನ ಪಡೆದರು.

ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಮಧ್ಯಾಹ್ನ 1ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿ ಗಳು ಗೊಂದಲ ಇಲ್ಲದೆ ಅಂತಿಮ ಗೌರವ ಸಲ್ಲಿಸಿದರು.

ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಲಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ಶಾಸಕ ಸುನಿಲ್‌ ಕುಮಾರ್‌, ಪ್ರತಾಪ್‌ಚಂದ್ರ ಶೆಟ್ಟಿ, ಪ್ರಮೋದ್‌ ಮಧ್ವರಾಜ್‌, ಗೋಪಾಲ ಪೂಜಾರಿ, ವಿನಯಕುಮಾರ್‌ ಸೊರಕೆ, ಮೃತರ ಪತ್ನಿ ಪ್ರಕಾಶಿನಿ, ಪುತ್ರರಾದ ಸುದೀಪ್‌, ಪ್ರದೀಪ್‌, ದೀಪಾ ಮೊದಲಾದವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ತಹಶೀಲ್ದಾರ್‌ ಮಹೇಶ್ಚಂದ್ರ, ಪ್ರಾಂಶುಪಾಲ ಮಂಜುನಾಥ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next