Advertisement

ಜಿ-20 ಶೃಂಗಸಭೆ ದೇಶದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸಲು ಸಹಕಾರಿ: ಪ್ರಮೋದ ಸಾವಂತ್

05:53 PM Mar 11, 2023 | Team Udayavani |

ಪಣಜಿ:  ಭಾರತದಲ್ಲಿ ಜಿ-20 ಶೃಂಗಸಭೆಯು ದೇಶದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ ಮತ್ತು ಗೋವಾದಲ್ಲಿ ಜಿ-20 ಶೃಂಗಸಭೆಯು ಗೋವಾದ ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಆಹಾರವನ್ನು ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಗೋವಾದ ಸಾಖಳಿಯ ಸರ್ಕಾರಿ ಕಾಲೇಜಿನಲ್ಲಿ ಹಿಂದಿ ವಿಭಾಗ ಮತ್ತು ಕಲೆ, ವಿಜ್ಞಾನ ಮತ್ತು ವಾಣಿಜ್ಯ ಹಿಂದಿ ಸಂಶೋಧನಾ ಕೇಂದ್ರ ಜಂಟಿಯಾಗಿ ಆಯೋಜಿಸಿದ್ದ “ಹಿಂದಿ ಸಾಹಿತ್ಯದಲ್ಲಿ ವ್ಯಕ್ತಪಡಿಸಿದ ವಿಶ್ವ ಆರ್ಥಿಕ ಸನ್ನಿವೇಶ”ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಅವರು ಮಾತನಾಡಿದರು.

Advertisement

ಸ್ವಾತಂತ್ರ್ಯದ ಅಮೃತ ಕಾಲಘಟ್ಟದಲ್ಲಿ ಕೇಂದ್ರ ಸರ್ಕಾರದ ಪ್ರಯತ್ನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತದಾದ್ಯಂತ ಹಿಂದಿ  ಭಾಷೆ ಜನಪ್ರಿಯತೆ ಗಳಿಸಿತ್ತು ಎಂದು ಮುಖ್ಯಮಂತ್ರಿ ಹೇಳಿದರು. ಮುಂದಿನ 25 ವರ್ಷಗಳಲ್ಲಿ ಹಿಂದಿಯ ಪ್ರಭಾವ ಇನ್ನೂ ಹೆಚ್ಚಾಗಬೇಕಿದೆ ಎಂದ ಅವರು, ಹಿಂದಿಗೆ ಜಾಗತಿಕ ಮನ್ನಣೆ ನೀಡುವ ಕುರಿತು ಮಾತನಾಡುವಾಗ ಜಪಾನ್ ಮತ್ತು ಆಸ್ಟ್ರೇಲಿಯಾದ ಗಣ್ಯರು ಭಾಗವಹಿಸುವ ಮೂಲಕ ಅಂತಾರಾಷ್ಟ್ರೀಯ ಹಿಂದಿ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ.

ಪ್ರಾಚೀನ ಕಾಲದಿಂದಲೂ ನಿರ್ಮಾಣವಾದ ಹೆಚ್ಚಿನ ಸಾಹಿತ್ಯ ಕೃತಿಗಳು ಸಂಸ್ಕೃತದ ನಂತರ ಹಿಂದಿಯಲ್ಲಿವೆ. ಗೋವಾ ಹಿಂದಿ ಭಾಷೆಯಲ್ಲಿ ತುಲನಾತ್ಮಕವಾಗಿ ಕಡಿಮೆ ಸಾಹಿತ್ಯ ಕೃತಿಗಳನ್ನು ಪ್ರಕಟವಾಗುತ್ತದೆ ಎಂಬ ಅಂಶದ ಬಗ್ಗೆ ಗಮನ ಸೆಳೆದ ಅವರು, ಮುಂದಿನ 25 ವರ್ಷಗಳಲ್ಲಿ ಹಿಂದಿ ಸಾಹಿತ್ಯಕ್ಕೆ ಗೋವಾ ಕೊಡುಗೆ ಗಮನಾರ್ಹವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next