Advertisement

G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!

01:24 AM Oct 13, 2024 | Team Udayavani |

ತುಮಕೂರು: ನಗರದಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಗಾಯಕ ಕಂಬದ ರಂಗಯ್ಯ ಅವರು ಬೊಂಬೆ ಹೇಳುತೈತೆ ಹಾಡು ಹಾಡಿದಾಗ, ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ವೇದಿಕೆ ಮೇಲೆ ಹಾಡಿಗೆ ತಕ್ಕಂತೆ ಕೈ ಬೀಸಿ ಹೆಜ್ಜೆ ಹಾಕಿದರು.

Advertisement

ನಗರದ ಸರಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ನಡೆದ ದಸರಾ ಉತ್ಸವದ ವಿವಿಧ ಕಾರ್ಯಕ್ರಮ ಕುರಿತು ಪರಮೇಶ್ವರ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಗಾಯಕ ಕಂಬದ ರಂಗಯ್ಯ ಅವರು ಪುನೀತ್‌ ರಾಜ್‌ಕುಮಾರ್‌ ಚಿತ್ರ ಬೊಂಬೆ ಹೇಳುತೈತೆ ಹಾಡನ್ನು ಹಾಡಿದರು. ಈ ವೇಳೆ ಸಚಿವರಾದಿಯಾಗಿ ಗಣ್ಯರು ವೇದಿಕೆ ಮೇಲೆ ಹಾಡಿಗೆ ಹೆಜ್ಜೆ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next