Advertisement

RSS ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್‌. ಉಮಾಪತಿ

12:04 AM Dec 18, 2023 | Team Udayavani |

ಬೆಂಗಳೂರು: ಆರೆಸ್ಸೆಸ್‌ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್‌.ಉಮಾಪತಿ ಅವರನ್ನು ನೇಮಿಸಲಾಗಿದೆ.

Advertisement

ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳ ಲ್ಕೆರೆಯ ಆಡನೂರು ಗ್ರಾಮದ ಉಮಾಪತಿ ಅವರು ದಾವಣಗೆರೆಯಲ್ಲಿ ಬಿ.ಇ. ಎಂಜಿನಿಯ ರಿಂಗ್‌ ವಿದ್ಯಾಭ್ಯಾಸ ಮುಗಿಸಿದ ಬಳಿಕ ಸುರತ್ಕಲ್‌ನ ಎನ್‌.ಐ.ಟಿ.ಕೆ.ಯಲ್ಲಿ ಎಂ.ಇ. ಇನ್‌ಸ್ಟ್ರಕ್ಚರ್ಸ್‌ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್‌ ಪಬ್ಲಿಕ್‌ ಹೆಲ್ತ್‌ ವ್ಯಾಸಂಗ ಪೂರೈಸಿದರು. ಕರ್ನಾಟಕದ ಪಿ.ಡಬ್ಲ್ಯು.ಡಿ. ಇಲಾಖೆಯಲ್ಲಿ ಅಧೀಕ್ಷಕ ಎಂಜಿನಿಯರ್‌ ಆಗಿ 2018ರಲ್ಲಿ ನಿವೃತ್ತರಾಗಿದ್ದರು.

ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ, ಬಳಿಕ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ
ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್‌ ಗೋಖಲೆ ಹಾಗೂ ಮಂಗಳೂರು ವಿಭಾಗದ ವಿಭಾಗ ಸಂಘಚಾಲಕರಾಗಿ ಡಾ| ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next