Advertisement

ಬೆಂಗಳೂರಿನಲ್ಲಿ ಇಂದಿನಿಂದ ಜಿ20 ಸಭೆ: ಬಿಗಿ ಭದ್ರತಾ ವ್ಯವಸ್ಥೆ

10:25 AM Dec 13, 2022 | Team Udayavani |

ಬೆಂಗಳೂರು: ನಗರದ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ಜಿ20 ರಾಷ್ಟ್ರಗಳ ಸಭೆ ನಡೆಯುವ ಹಿನ್ನೆಲೆಯಲ್ಲಿ ಭಾರಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement

ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್‌ ನಲ್ಲಿ ಶೃಂಗಸಭೆ ನಡೆಯಲಿದೆ. ಮೂರು ದಿನಗಳ ಕಾಲ ಜಾಗತಿಕ ಮಟ್ಟದ ಸವಾಲುಗಳು, ಅಂತಾರಾಷ್ಟ್ರೀಯ ಮಟ್ಟದ ಹಣಕಾಸು ಪುನರುಜ್ಜೀವನಗೊಳಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ.

ಯುರೋಪಿಯನ್‌ ಯೂನಿಯನ್‌ ದೇಶಗಳಿಂದ ಗಣ್ಯರು ಇಂದು ಆಗಮಿಸುತ್ತಿದ್ದಾರೆ. ಹಲವು ದೇಶಗಳ ಹಣಕಾಸು ಕಾರ್ಯದರ್ಶಿಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಇಶಾಂತ್, ರಹಾನೆಗಿಲ್ಲ ಸೆಂಟ್ರಲ್ ಕಾಂಟ್ರಾಕ್ಟ್: ಪಾಂಡ್ಯ, ಸೂರ್ಯ, ಗಿಲ್ ಗೆ ಬಡ್ತಿ ಸಾಧ್ಯತೆ

ಡಿ.17 ರವರೆಗೂ ಸಭೆಗಳು ನಡೆಯಲಿದ್ದು, ಈ ಸಭೆಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಗಳು ಮಾತ್ರ ಭಾಗಿಯಾಗುವರು. ರಾಜ್ಯ ಸರಕಾರದ ಉನ್ನತಾಧಿಕಾರಿಗಳು ಸಮನ್ವಯ ಕಾರ್ಯದಲ್ಲಿ ಮಾತ್ರ ಜತೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next