Advertisement

G- 20 ಸಮ್ಮೇಳನ ಯಶಸ್ಸು: ಪ್ರಧಾನಿಗೆ ಅಭಿನಂದನೆ

01:16 AM Sep 14, 2023 | Team Udayavani |

ಹೊಸದಿಲ್ಲಿ: ಜಿ20 ಶೃಂಗಸಭೆಯ ಅದ್ಭುತ ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೇಂದ್ರ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಮಾಹಿತಿ ನೀಡಿದ್ದಾರೆ.

Advertisement

“ಜಾಗತಿಕ ಜೈವಿಕ ಇಂಧನ ಮೈತ್ರಿಕೂಟ ರಚಿಸುವ ಮೂಲಕ ಪ್ರಧಾನಿ ಮೋದಿ ಅವರು “ಜಾಗತಿಕ ಮೈತ್ರಿಗಳ ವ್ಯಕ್ತಿ’ ಆಗಿ ಹೊರಹೊಮ್ಮಿದ್ದಾರೆ. ಈ ಹಿಂದೆ, ಜಾಗತಿಕ ಸೌರ ಇಂಧನ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಹೇಳಿದ್ದಾರೆ.

ಇದೇ ವೇಳೆ, ಮುಂದಿನ ನಾಲ್ಕು ವರ್ಷಗಳಲ್ಲಿ 3ನೇ ಹಂತದ ಇ-ಕೋರ್ಟ್‌ ಯೋಜನೆಗೆ ಕೇಂದ್ರ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಅದಕ್ಕಾಗಿ 7,210 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ಸಚಿವ ಠಾಕೂರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next