Advertisement

ಗದಗ: ಬೆಳ್ಳಂಬೆಳಗ್ಗೆ ಪಿಡಿ ಎಸ್.ಎನ್ ರುದ್ರೇಶ್ ನಿವಾಸದ ಮೇಲೆ ಎಸಿಬಿ ದಾಳಿ

10:51 AM Oct 22, 2020 | Mithun PG |

ಗದಗ: ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜ‌ನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಅವರ ಮನೆ, ಕಚೇರಿ ಸೇರಿದಂತೆ ಮೂರು ಕಡೆ ಗುರುವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು  ದಾಳಿ ನಡೆಸಿದ್ದಾರೆ.

Advertisement

ಬೆಳಗ್ಗೆ 5 ಗಂಟೆ ಸುಮಾರಿಗೆ ನಗರದ ನೌಕರರ ಭವನ ಹಿಂಭಾಗದ ಕಂದಾಯ ಇಲಾಖೆ ಅಧಿಕಾರಿಗಳ ವಸತಿ ಬಡಾವಣೆಯಲ್ಲಿರುವ ಮನೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಮನೆ ಹಾಗೂ ಜಿಲ್ಲಾಡಳಿತ ಭವನದ ಕಚೇರಿಗೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ  ದಾಳಿ ನಡೆಸಿದ್ದಾರೆ.

ಮನೆಯ ಮೇಲ್ಛಾವಣಿ, ಗಾರ್ಡನ್, ವಾಹನ ಪಾರ್ಕಿಂಗ್ ಜಾಗವನ್ನೂ ಬಿಡದೆ ಶೋಧ ನಡೆಸುತ್ತಿದ್ದಾರೆ. ಬೆಳಗಾವಿ ಎಸಿಬಿ ಡಿಎಸ್ಪಿ ಮಹಾಂತೇಶ್ವರ ಸಿಪಿಐ ಧರ್ನಾಯಕ, ಸಂಜೀವಕುಮಾರ ನೇತೃತ್ವದಲ್ಲಿ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:  ಕೋವಿಡ್-19 ಲಸಿಕೆ: ಆಸ್ಟ್ರಾಜೆನಾಕ ಔಷಧಿ ಪ್ರಯೋಗದ ವೇಳೆ ಸ್ವಯಂಸೇವಕ ಸಾವು

Advertisement

 

Advertisement

Udayavani is now on Telegram. Click here to join our channel and stay updated with the latest news.

Next