Advertisement

Gadag; ಬಸ್ ಗಳ ನಡುವೆ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

05:43 PM Aug 17, 2024 | Team Udayavani |

ಗದಗ: ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಗಳಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇದರಿಂದಾಗಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ತಾಲೂಕಿನ ಅಡವಿಸೋಮಾಪೂರ ಕ್ರಾಸ್ ಬಳಿ ಶನಿವಾರ(ಆ17) ಸಂಭವಿಸಿದೆ.

Advertisement

ಗದಗನಿಂದ ಮುಂಡರಗಿ ಹೊರಟಿದ್ದ ಬಸ್ ಹಾಗೂ ಕೊಪ್ಪಳದಿಂದ ಗದುಗಿಗೆ ಬರುತ್ತಿದ್ದ ಎರಡು ಬಸ್ಗಳ ಈ ಅಪಘಾತ ಸಂಭವಿಸಿದೆ. ಗದಗನಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಸ್ಥಳದಲ್ಲಿದ್ದ ಹಲವರಿಂದ ಕೇಳಿ ಬಂದಿದ್ದು, ಕೊಪ್ಪಳದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ಗಮನಿಸದೇ ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಇನ್ನುಳಿದ 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗನಿಂದ ಮುಂಡರಗಿಗೆ ತೆರಳುವ ವಾಹನಗಳು ರಾಷ್ಟ್ರೀಯ ಹೆದ್ದಾರಿಯನ್ನು ಕ್ರಾಸ್ ಮಾಡಿ ತೆರಳಬೇಕಾದ ಅನಿವಾರ್ಯತೆ ಇದೆ. ಈ ಸ್ಥಳದಲ್ಲಿ ಈಗಾಗಲೇ ಹಲವಾರು ಬಾರಿ ಗಂಭೀರ ಸ್ವರೂಪದ ಅಪಘಾತಗಳು ಸಂ‍ಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next