Advertisement

Gadag: ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ ಅಡ್ಡಗಟ್ಟಿ ಪುಂಡಾಟ; ಚಾಲಕ ಆಸ್ಪತ್ರೆಗೆ ದಾಖಲು

11:25 AM Feb 09, 2024 | Team Udayavani |

ಗದಗ: ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ ಅಡ್ಡಗಟ್ಟಿದ ಯುವಕರ ತಂಡವೊಂದು ಪುಂಡಾಟ ಮೆರೆದ ಘಟನೆ ಗದಗ ಹೊರವಲಯದ ಅಸುಂಡಿ ಬಳಿ ನಡೆದಿದೆ.

Advertisement

ಸಾರಿಗೆ ಬಸ್ ಗದಗದಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಇದೇ ವೇಳೆ ನಾಲ್ವರು ಅಸುಂಡಿ ಬಳಿ ಸ್ವಿಫ್ಟ್ ಕಾರ್ ನಲ್ಲಿ ಹೊರಟಿದ್ದರು. ಹಿಂಬದಿಯಿಂದ ಹೊರಟಿದ್ದ ಸಾರಿಗೆ ಬಸ್ ಚಾಲಕ ಹಾರ್ನ್ ಮಾಡಿದ್ದಾನೆ. ಕಾರ್ ಸೈಡ್ ಮಿರರ್ ಕ್ಲೋಸ್ ಮಾಡಿದ್ದನ್ನು ಗಮನಿಸಿ ಐದಾರು ಬಾರಿ ಬಸ್ ಡ್ರೈವರ್ ಹಾರ್ನ್ ಮಾಡಿದ್ದ. ಇದಕ್ಕೆ ಕೋಪಗೊಂಡ ಯುವಕರ ತಂಡ ಬಸ್ ನಿಲ್ಲಿಸಿ ವಾಗ್ವಾದಕ್ಕಿಳಿದ್ದಾರೆ.

ಸ್ವಿಫ್ಟ್ ನಲ್ಲಿ ಹೊರಟಿದ್ದ ನಾಲ್ವರು ಬಸ್ ಅಡ್ಡಗಟ್ಟಿ ರಂಪಾಟ ಮಾಡಿದ್ದಾರೆ. ಯಾಕೆ ಹಾರ್ನ್ ಹಾಕಿದೆ ಎಂದು ತಗಾದೆ ತೆಗೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಗಲಾಟೆಯಲ್ಲಿ ಬಸ್ ಡ್ರೈವರ್ ಸಂತೋಷ್ ಅಸೂಟಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next