Advertisement

Gadag: ಕ್ಯಾಂಟರ್ ಪಲ್ಟಿ; ಮೂವರು ಸಾವು, ಇಬ್ಬರಿಗೆ ಗಾಯ

06:25 PM Mar 06, 2024 | Team Udayavani |

ಗದಗ: ಶಾಮಿಯಾನ ಸಾಗಾಟ ಮಾಡುತ್ತಿದ್ದ ಕ್ಯಾಂಟರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟಿದ್ದು , ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ.

Advertisement

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದ ನವೀನ್ ಕುಂಬಾರ್ (23) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್ ಕಾಳಿ(23) ಹಾಗೂ ಗಂಗಾಧರ ಅಕ್ಕಿ (22) ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂವರು ಯುವಕರು ಕುಂದಗೋಳದ ಎಸ್‌ಆರ್‌ಎಂ ಶಾಮಿಯಾನದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಕುಂದಗೋಳ ಪಟ್ಟಣದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಹಳ್ಳಿಗುಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ.

ಚಾಲಕ ಪರಾರಿಯಾಗಿದ್ದು, ಸುದ್ದಿ ತಿಳಿದು ಮುಂಡರಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next