Advertisement

ರಾಷ್ಟ್ರಮಟ್ಟದ ಎಂಟಿಬಿ ಸ್ಪರ್ಧೆ : ಪೂರ್ವಸಿದ್ಧತೆ ಪರಿಶೀಲನೆ

04:12 PM Feb 14, 2021 | Team Udayavani |

ಗದಗ: ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿಫೆ.18ರಿಂದ 21ರ ವರೆಗೆ ನಡೆಯುವ ರಾಷ್ಟ್ರ ಮಟ್ಟದ 17ನೇ ಮೌಂಟೇನ್‌ಬೈಕ್‌ ಸೈಕ್ಲಿಂಗ್‌ ಸ್ಪರ್ಧೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಶನಿವಾರ ಉದ್ಯಾನಕ್ಕೆ ಭೇಟಿ ನೀಡಿ, ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

Advertisement

ಮೌಂಟೇನ್‌ ಬೈಕ್‌ ಸೈಕ್ಲಿಂಗ್‌ ಸ್ಪರ್ಧೆಯ ಟ್ರ್ಯಾಕ್‌ ಹಾಗೂ ಊಟ, ವಸತಿ, ಕುಡಿಯುವ ನೀರು, ಸ್ವತ್ಛತೆಯ ಬಗ್ಗೆ ಸಂಬಂಧಿ ಸಿದ ಇಲಾಖೆಗಳ ಅಧಿ ಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳೊಂದಿಗೆ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಡಿಎಫ್‌ಒ ಸೂರ್ಯಸೇನ್‌, ರಾಜ್ಯ ಸೈಕ್ಲಿಂಗ್‌ ಸಂಸ್ಥೆಯ ಉಪಾಧ್ಯಕ್ಷ ಜಿ.ವಿ.ಪಾಟೀಲ, ರಾಜ್ಯ ಸೈಕ್ಲಿಂಗ್‌ ಸಂಸ್ಥೆ ಗೌರವ ಕಾರ್ಯದರ್ಶಿ ಎಸ್‌.ಎಂ.ಕುರಣಿ, ಯುವ ಸಬಲೀಕರಣ  ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಬಿ.ವಿಶ್ವನಾಥ, ಸೈಕ್ಲಿಂಗ್‌ ತರಬೇತುದಾರ ಅನಂತ ದೇಸಾಯಿ, ಅಸುಂಡಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next