Advertisement

ಗದಗ : ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50 ಮಕ್ಕಳು ಅಸ್ವಸ್ಥ 

02:44 PM Jul 15, 2017 | Team Udayavani |

ಗದಗ: ತಾಲೂಕಿನ ಅಂತೂರು ಬೆಂತೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದು ಕೆಲವರಿಗೆ ವಾಂತಿಯಾಗಿದ್ದು, ಕೆಲವರಿಗೆ ತಲೆ ಸುತ್ತು ಬಂದಿದೆ ಎಂದು ಹೇಳಲಾಗಿದೆ. 

Advertisement

108 ಅಂಬುಲೆನ್ಸ್‌ಗೆ ಕರೆ ಮಾಡಲಾಯಿತಾದರೂ ಸಕಾಲಕ್ಕೆ ಬರಲಿಲ್ಲ.ಮಕ್ಕಳಿಗೆ  ಸರ್ಕಾರಿ ಶಾಲೆಯ ಆವರಣದಲ್ಲೇ ಚಿಕಿತ್ಸೆ ನೀಡಲಾಗಿದೆ. 2 ಗಂಟೆಯ ಬಳಿಕ 10 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ. 

ವಿಷಯ ತಿಳಿದು ಕಂಗಾಲಾದ ನೂರಾರು ಪೋಷಕರು ಶಾಲೆಯ ಆವರಣದಲ್ಲಿ ಜಮಾಯಿಸಿ ತಮ್ಮ ತಮ್ಮ ಮಕ್ಕಳ ಕ್ಷೇಮ ನೋಡಿಕೊಂಡರು. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next