Advertisement

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

02:34 PM Mar 28, 2024 | Team Udayavani |

ಗದಗ: ನಗರದ ಸಾಯಿ ಬಡಾವಣೆಯಲ್ಲಿ ಕೃಷಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಕೊಪ್ಪಳದ ಕೃಷಿ ಇಲಾಖೆ ಉಪನಿರ್ದೇಶಕರಾಗಿರುವ ಸಹದೇವ ಯರಗೊಪ್ಪ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಗದಗ ಮೂಲದ ಸಹದೇವ ಯರಗೊಪ್ಪ ಮನೆ ಸೇರಿದಂತೆ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಗದಗನ ರೋಣ ತಾಲೂಕಿನ ಮೆಣಸಗಿಯ ಸ್ವಗೃಹದಲ್ಲೂ ದಾಖಲೆಗಳ ಪರಿಶೀಲನೆ ನಡೆದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಅನುಮಾನದ ಹಿನ್ನೆಲೆ ದಾಳಿ ನಡೆದಿದೆ.

ಲೋಕಾಯುಕ್ತ ಎಸ್.ಪಿ. ಸತೀಶ್ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ ಪಿ ವಿಜಯ್ ಬಿರಾದಾರ್, ಸಿಪಿಐ ರವಿ ಪುರುಷೋತ್ತಮ, ಐಯ್ಯನಗೌಡರ್,

Advertisement

ಇನ್ಸಪೆಕ್ಟರ್ ಸಾಹುಬಾಯಿ ತೇಲಿ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next