Advertisement

Gadag; ರಾಮ ಮೂರ್ತಿ ಮೆರವಣಿಗೆಗೆ ಅನುಮತಿ ನೀಡದ ಪೊಲೀಸ್ ಇಲಾಖೆ

12:58 PM Jan 20, 2024 | Team Udayavani |

ಗದಗ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ದಿನ ಗದಗ ನಗರದಲ್ಲಿ ಮೆರವಣಿಗೆ ನಡೆಸಲು ಅವಕಾಶ ನೀಡದ ಪೊಲೀಸ್ ಇಲಾಖೆ ವಿರುದ್ಧ ಗದಗ ಜಿಲ್ಲಾ ಶ್ರೀ ರಾಮ ಸೇನೆಯ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

Advertisement

ಜನವರಿ 22 ರಂದು ಗದಗ ನಗರದಲ್ಲಿ ಶ್ರೀ ರಾಮನ ಮೂರ್ತಿಯ ಭವ್ಯ ಮೆರವಣಿಗೆಗೆ ಶ್ರೀ ರಾಮ ಸೇನೆ ಸಿದ್ಧತೆ ಮಾಡಿಕೊಂಡಿದೆ. ಆದರೆ ಮೊದಲು ಅವಕಾಶ ನೀಡಿದ್ದ ಪೊಲೀಸ್ ಇಲಾಖೆ ಇದೀಗ ಡಿಜಿ, ಐಜಿ ಅವಕಾಶ ನೀಡುತ್ತಿಲ್ಲ ಎಂದು ರದ್ದು ಮಾಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಾವು ಮೆರವಣಿಗೆ ಮಾಡುತ್ತೇವೆ ಎಂದು ಶ್ರೀ ರಾಮ ಸೇನೆ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. 20 ಸಾವಿರ ಜನರ ನೇತೃತ್ವದಲ್ಲಿ, ಎಂಟು ಅಡಿ ಬೃಹತ್ ಶ್ರೀರಾಮನ ಮೂರ್ತಿಯೊಂದಿಗೆ ಮೆರವಣಿಗೆ ಆಯೋಜನೆ ಮಾಡಲಾಗಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಅನುಮತಿ ನೀಡದಿದ್ದರೂ ಶೋಭಾ ಯಾತ್ರೆ ಮಾಡುವುದಾಗಿ ಪಟ್ಟು ಹಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next