Advertisement

ಬಿಜೆಪಿ ಬಲವರ್ಧನೆಗೆ ಎಲ್ಲರೂ ಶ್ರಮಿಸಿ

03:38 PM Apr 14, 2021 | Team Udayavani |

ಗದಗ: ಪಕ್ಷ ಬಲವರ್ಧನೆಗೆ ಎಲ್ಲರು ಶ್ರಮಿಸಬೇಕು. ಪಕ್ಷದ ಚಟುವಟಿಕೆಗಳಲ್ಲಿ ಪ್ರಮುಖರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

Advertisement

ನಗರದ ಇತ್ತೀಚೆಗೆ ನಡೆದ ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಸಾಕಷ್ಟುಅಭಿವೃದ್ಧಿ ಕಾರ್ಯ ಕ್ರಮಗಳ ಮೂಲಕ ಜನಪರಆಡಳಿತ ನೀಡುತ್ತಿದೆ. ಈ ಬಗ್ಗೆ ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷವನ್ನು ಮತ್ತಷ್ಟು ಬಲವರ್ಧನೆಗೊಳಿಸಬೇಕು ಎಂದು ತಿಳಿಸಿದರು.

ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಮಾತನಾಡಿ,ಜಿಲ್ಲೆಯ ಒಬಿಸಿ ಮೋರ್ಚಾ 9 ಮಂಡಲಗಳಲ್ಲಿ ಪಕ್ಷದ ಗಟ್ಟಿತನಕ್ಕೆ ಶ್ರಮಿಸಬೇಕು. ಹಿಂದುಳಿದ ವರ್ಗಗಳಜನರಿಗೆ ಸರ್ಕಾರದ ಎಲ್ಲ ಸವಲತ್ತುಗಳನ್ನು ವಿವರಿಸಿ,ಅರ್ಹರು ಪಡೆದುಕೊಳ್ಳು ವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆಬರಬೇಕಾದರೆ, ಹಿಂದುಳಿದ ವರ್ಗಗಳ ಸಮಾಜದ ಕೊಡುಗೆ ಮಹತ್ವದ್ದಾಗಿದೆ ಎಂದು ವಿವರಿಸಿದರು.ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರವಿ ದಂಡಿನ, ಜಿಲ್ಲಾಧ್ಯಕ್ಷ ಅಶೋಕ ಹೆಬ್ಬಳ್ಳಿಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ದ್ರಾಕ್ಷಾರಸ ನಿಗಮದ ಅಧ್ಯಕ್ಷ ಕಾಂತೀಲಾಲ ಬನ್ಸಾಲಿ,ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಾಬು, ಪ್ರಬಾರಿಗಳಾದ ಪ್ರವೀಣಪವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ಪ್ರಮುಖರಾದ ಗಂಗಾಧರ ಹಬೀಬ್‌,ಸುರೇಶ ಮರಳಪ್ಪನವರ, ವೀರಭದ್ರಪ್ಪ ಡಾಣಿಹಾಗೂ ಒಬಿಸಿ ಮೋರ್ಚಾದ ಮಂಡಲ ಅಧ್ಯಕ್ಷರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next