Advertisement

ರಾಜ್ಯದ ಖನಿಜ ರಕ್ಷಣೆಗೆ ಪ್ರತ್ಯೇಕ ಪಡೆ: ಸಚಿವ ಪಾಟೀಲ

11:12 AM Sep 28, 2020 | sudhir |

ಗದಗ: ರಾಜ್ಯದಲ್ಲಿ ಖನಿಜ ಸಂಪತ್ತಿನ ರಕ್ಷಣೆಗಾಗಿ ನಿವೃತ್ತ ಸೇನಾಧಿಕಾರಿಗಳನ್ನು ಒಳಗೊಂಡ ಖನಿಜ ರಕ್ಷಣಾ ಪಡೆಯನ್ನು
ರಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ತಿಳಿಸಿದರು.

Advertisement

ವಿಧಾನ ಪರಿಷತ್‌ನಲ್ಲಿ ಗುರುವಾರ ಕ್ರಷರ್‌ಗಳ ನಿಯಂತ್ರಣ (ತಿದ್ದುಪಡಿ) ಮಸೂದೆ-2020ರ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಎಲ್ಲ ಜಿಲ್ಲೆಗಳಲ್ಲೂ ಖನಿಜಗಳ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ ತಡೆಯುವ ನಿಟ್ಟಿನಲ್ಲಿ ಈ ಖನಿಜ ರಕ್ಷಣಾ ಪಡೆಗಳನ್ನು ರಚಿಸಲಾಗುವುದು.

ಕ್ರಷರ್‌ಗಳ ಗುತ್ತಿಗೆ ಅವಧಿ ಯನ್ನು 20 ವರ್ಷಗಳಿಗೆ ವಿಸ್ತರಿಸುವ, ಪಾಲುದಾರರನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್‌ ಅಂಗೀಕಾರ ನೀಡಿದೆ. ಜಿಲ್ಲಾ ಖನಿಜ ನಿಧಿ  ಬಳಕೆಗೆ ಸಂಬಂ ಧಿಸಿದಂತೆ ಕ್ರಿಯಾಯೋಜನೆ
ರೂಪಿಸುವಾಗ ಸ್ಥಳೀಯ ವಿಧಾನ ಪರಿಷತ್‌ ಸದಸ್ಯರಿಗೂ ಕಾಮಗಾರಿಗಳನ್ನು ಸೂಚಿಸಲು ಅವಕಾಶ ಕಲ್ಪಿಸಬೇಕೆಂಬ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಎಲ್ಲ ಜಿಲ್ಲಾ ಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next