Advertisement

ಭೀಕರ ರಸ್ತೆ ಅಪಘಾತ : ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಸಾವು, ಚಾಲಕ ವಾಹನ ಬಿಟ್ಟು ಪರಾರಿ

08:24 PM Jul 13, 2022 | Team Udayavani |

ಗದಗ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಪರಸಾಪೂರ ಕ್ರಾಸ್ ಬಳಿ ಬುಧವಾರ ನಡೆದಿದೆ.

Advertisement

ಶಿರಹಟ್ಟಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಅಶೋಕ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ವಿ.ಎಸ್. ಬೂದಿಹಾಳ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಧಿಕಾರಿಗಳು ಶಿರಹಟ್ಟಿ ಪಟ್ಟಣದಿಂದ ಕಾರ್ಯ ನಿಮಿತ್ತ ಮಾಗಡಿ‌ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ಬಳಿಕ ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಸಿಪಿಐ ವಿಕಾಸ ಲಮಾಣಿ ಭೇಟಿ ಪರಿಶೀಲನೆ ನಡೆಸಿದ್ದು, ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ : ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ : ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಸ್ಥ

Advertisement
Advertisement

Udayavani is now on Telegram. Click here to join our channel and stay updated with the latest news.

Next