Advertisement

Tragedy: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯಶ್ ಅಭಿಮಾನಿ ಸಾವು

10:24 AM Jan 09, 2024 | Team Udayavani |

ಗದಗ: ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಿಸುತ್ತಿದ್ದ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ.

Advertisement

ತಾಲೂಕಿನ ಬಿಂಕದಕಟ್ಟಿ ನಿವಾಸಿ ನಿಖಿಲಗೌಡ ಭೀಮನಗೌಡ್ರ ಗೌಡರ(22) ಮೃತ ಯುವಕ. ಸೋಮವಾರ ಮುಳಗುಂದ ರಸ್ತೆಯಲ್ಲಿ ಉಂಟಾದ ಅಪಘಾತದಲ್ಲಿ ಗಾಯಗೊಂಡಿದ್ದ ನಿಖಿಲಗೌಡ ಅವರನ್ನು ಜಿಮ್ಸ್ ನಲ್ಲಿ ದಾಖಲಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮೃತ ನಿಖಿಲಗೌಡ ಲಕ್ಷ್ಮೇಶ್ವರ ತಾಲೂಕಿನ ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಯಶ್ ನೋಡಲು ಸೂರಣಗಿ ‌ಗ್ರಾಮಕ್ಕೂ ತೆರಳಿದ್ದ ಎನ್ನಲಾಗಿದೆ. ಆದರೆ ಅಲ್ಲೂ ಯಶ್ ನೋಡಲು ಆಗಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ಯಶ್ ಜನ್ಮದಿನದಂದೇ ನಾಲ್ವರು ಅಭಿಮಾನಿಗಳು ಸಾವಿಗೀಡಾಗಿರುವುದು ದುರಂತವೇ ಆಗಿದೆ.

ಇದನ್ನೂ ಓದಿ: ‌Ayodhya:ನೂತನ ರಾಮಲಲ್ಲಾ ವಿಗ್ರಹ ಪುರ ಮೆರವಣಿಗೆ ರದ್ದು-Trust ಈ ನಿರ್ಧಾರ ಕೈಗೊಂಡಿದ್ದೇಕೆ?

Advertisement
Advertisement

Udayavani is now on Telegram. Click here to join our channel and stay updated with the latest news.

Next