Advertisement

ಗಡಿಪಿಲ : ರೈಲು ಡಿಕ್ಕಿ ಹೊಡೆದು ಎರಡು ಕಾಡುಕೋಣಗಳ ಸಾವು

02:42 PM Mar 17, 2022 | Team Udayavani |

ಸವಣೂರು: ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ ಮರಳಿ ಕಾಡು ಸೇರಲು ರೈಲ್ವೆ ಹಳಿಯಲ್ಲಿ ಹೋಗುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದೆ.

Advertisement

ಘಟನಾ ಸ್ಥಳಕ್ಕೆ ಎಸಿಎಫ್ ಕಾರ್ಯಪ್ಪ, ಪುತ್ತೂರು ವಲಯಾರಣ್ಯಾಧಿಕಾರಿ ಕಿರಣ್, ನರಿಮೊಗರು ಉಪ ವಲಯಾರಣ್ಯಾಧಿಕಾರಿ ಕುಮಾರಸ್ವಾಮಿ, ಇಪುತ್ತೂರು ಉಪ ವಲಯಾರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕರಾದ ಸತ್ಯನ್ ಡಿ.ಜಿ ಹಾಗೂ ದೀಪಕ್ ಭೇಟಿ ನೀಡಿ ಸಾವನ್ನಪ್ಪಿದ ಕಾಡುಕೋಣಗಳ ಮರಣೋತ್ತರ ಮಹಜರು ನಡೆಸಿದರು.

ಇದನ್ನೂ ಓದಿ : ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ

Advertisement

Udayavani is now on Telegram. Click here to join our channel and stay updated with the latest news.

Next