Advertisement

ಆದಾಯ ಮೀರಿ ಆಸ್ತಿ ಗಳಿಕೆ: ನಿವೃತ್ತ ನ್ಯಾಯಾಧೀಶರಿಗೆ 2 ವರ್ಷ ಜೈಲು

12:06 AM Feb 15, 2023 | Team Udayavani |

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಹೊಸದಿಲ್ಲಿಯ ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿಯ ನಿವೃತ್ತ ನ್ಯಾಯಾಧೀಶ ಜೆ.ಇ. ವೀರಭದ್ರಪ್ಪ ಸೇರಿ ಒಂದೇ ಕುಟುಂಬದ ಮೂವರಿಗೆ 34ನೇ ಸಿಬಿಐ ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಹಾಗೂ 1.5 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

Advertisement

ಆರೋಪಿಗಳ ಒಂದು ಕೋಟಿ ಎಪ್ಪತ್ತೈದು ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್‌.ಮೋಹನ್‌ ಅವರು ಮಂಗಳವಾರ ಆದೇಶ ನೀಡಿದರು.

ವೀರಭದ್ರಪ್ಪ ವಿರುದ್ಧ 2013ರಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಬೆಂಗಳೂರಿನ ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು 2014ರಲ್ಲಿ ಆರೋಪಿ ಮತ್ತು ಕುಟುಂಬ ಸದಸ್ಯರು ಅಕ್ರಮ ಆಸ್ತಿ ಗಳಿಕೆ ಬಗ್ಗೆ ಉಲ್ಲೇಖೀಸಿ ಆರೋಪ ಪಟ್ಟಿ ಸಲ್ಲಿಸಿದ್ದರು.

ವೀರಭದ್ರಪ್ಪ 2002ರಿಂದ 2013ರವರೆಗೆ ಬೆಂಗಳೂರು, ಮುಂಬಯಿ, ಹೊಸದಿಲ್ಲಿ ವಿಭಾಗ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸದಸ್ಯರು ಹಾಗೂ ಉಪಾಧ್ಯಕ್ಷ ಹುದ್ದೆ ನಿರ್ವಹಿಸುತ್ತಿದ್ದರು. ಈ ವೇಳೆ ಹಲವು ಕಡೆ ಕೃಷಿ ಭೂಮಿ, ನಿವೇಶನ, ಮನೆ ಹಾಗೂ ಇತರೆ ಸ್ಥಿರ ಹಾಗೂ ಚರ ಆಸ್ತಿ ಸಂಪಾದಿಸಿದ್ದರು ಎಂದು ದೂರಲಾಗಿತ್ತು. ಸಿಬಿಐ ಪರ ಹಿರಿಯ ಸರಕಾರಿ ಅಭಿಯೋಜಕರಾಗಿ ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next