Advertisement

“ಗಜ’ಚಂಡಮಾರುತ ಪ್ರಭಾವ: ಕರ್ನಾಟಕದಲ್ಲಿ ಮಳೆ ಸಾಧ್ಯತೆ

07:13 AM Nov 14, 2018 | |

ಬೆಂಗಳೂರು: ತಮಿಳುನಾಡಿನ ಕರಾವಳಿಗೆ ಅಪ್ಪಳಿಸಲಿರುವ “ಗಜ’ ಚಂಡ ಮಾರುತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಲಿದೆ. ಪರಿಣಾಮ ನ.15ರಿಂದ ಮೂರು ದಿನ ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್‌ ನಿಕೋಬಾರ್‌ ಬಳಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗಲಿದೆ. ಅದರಂತೆ ನ.15, 16 ಹಾಗೂ 17ರಂದು ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ವರ್ಷ ಅಕ್ಟೋಬರ್‌ ತಿಂಗಳಿನಿಂದ ಡಿಸೆಂಬರ್‌ವರೆಗೆ ಬೆಂಗಳೂರಿನಲ್ಲಿ 286 ಮಿ.ಮೀ.ಮಳೆಯಾಗಿತ್ತು. ಸಾಮಾನ್ಯವಾಗಿ ಈ ಅವಧಿಯಲ್ಲಿ ವಾಡಿಕೆಯಂತೆ 185 ಮಿ.ಮೀ.ಮಳೆಯಾಗುತ್ತದೆ.
ಆದರೆ, ಈ ಬಾರಿ ಅಕ್ಟೋಬರ್‌ನಿಂದ ನ.12ರವರೆಗೆ 88.6 ಮಿ.ಮೀ. ಮಳೆ ಸುರಿದಿದೆ. 

Advertisement

ರಾಜ್ಯದಲ್ಲಿ ಮುಂಗಾರು ಸ್ವಲ್ಪಮಟ್ಟಿಗೆ ಚುರುಕುಗೊಂಡಿತ್ತು. ಆದರೆ, ಹಿಂಗಾರು ಮಳೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ
ಸೃಷ್ಟಿಯಾಗಿರುವ ಚಂಡಮಾರುತದಿಂದ ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ಮಳೆಯಾಗಬಹುದು ಎನ್ನಲಾಗಿದೆ. ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗಬಹುದು ಅಥವಾ ಮೋಡ ಮುಸುಕಿದ ವಾತಾವರಣ ಕಂಡು ಬಂದು, ಚಳಿ ಕಡಿಮೆಯಾಗಬಹುದು. ಸದ್ಯ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29-30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 17-18 ಸೆಲ್ಸಿಯಸ್‌ನಷ್ಟಿದೆ. ಹಗಲಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದರೆ, ಸಂಜೆ ಹಾಗೂ ರಾತ್ರಿ ವೇಳೆಗೆ ಕೊರೆಯುವ ಚಳಿಯ ಅನುಭವವಾಗುತ್ತಿದೆ. ಶುಭ್ರ ಆಕಾಶವಿರುವುದರಿಂದ ತಾಪಮಾನ ಇಳಿಯುತ್ತದೆ. ಮೋಡ ಬಂದರೆ ತಾಪಮಾನ ಮೇಲಕ್ಕೇರುತ್ತದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next