Advertisement

ಯಾರಿಗೂ ಹೆದರುವ ಮಾತಿಲ್ಲ..: ರಾಯಚೂರಿನಲ್ಲಿ ಗಾಲಿ ರೆಡ್ಡಿ ಟೆಂಪಲ್ ರನ್

03:15 PM Jan 27, 2023 | Team Udayavani |

ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖ್ಯಸ್ಥ ಗಾಲಿ ಜನಾರ್ದನ ರೆಡ್ಡಿ ರಾಯಚೂರಿಗೆ ಭೇಟಿ ನೀಡಿದ್ದು, ಟೆಂಪಲ್ ರನ್ ನಡೆಸಿದ್ದಾರೆ.

Advertisement

ಬೆಳಗ್ಗೆ ದೇವಸೂಗುರಿನ ಶ್ರೀ ಸೂಗೂರೇಶ್ವರ ಸ್ವಾಮಿಗೆ ಭೇಟಿ ನೀಡಿದರು. ನಂತರ ನಗರದ ಶಂಶಾಲ ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಆಮೇಲೆ ನಗರದ ಪ್ರಮುಖ ದೇವಸ್ಥಾನವಾದ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಇದನ್ನೂ ಓದಿ:ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್‌ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ನಿಧನ

ಈ ವೇಳೆ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿ ಜಿಲ್ಲೆಯಂತೆ ರಾಯಚೂರು ಕೂಡ ನನಗೆ ಬೇಕಾದ ಜಿಲ್ಲೆ. ಇಲ್ಲಿಯೂ ನನ್ನನ್ನು ಪ್ರೀತಿಸುವ ಜನರಿದ್ದಾರೆ. ಅನೇಕ ಸ್ನೇಹಿತರಿದ್ದಾರೆ. ರಾಯಚೂರು ಬಳ್ಳಾರಿ ನನಗೆ ಬೇರೆಯಲ್ಲ. ಮುಂದಿನ ತಿಂಗಳು ರಾಯಚೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಸಾವಿರಾರು ಜನ ನಮ್ಮ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಾನು ಮಾನಸಿಕವಾಗಿ ಸಾಕಷ್ಟು ಸಿದ್ಧಗೊಂಡಿದ್ದು, ಯಾರಿಗೂ ಹೆದರುವ ಮಾತೇ ಇಲ್ಲ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next