Advertisement

Sandalwood: ನಿರುದ್ಯೋಗದ ಸುತ್ತ ಗಾಂಧಿನಗರ

09:48 AM May 13, 2024 | Team Udayavani |

ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಲು ಹೊರಟರೆ ಅಲ್ಲಿ “ಗಾಂಧಿನಗರ’ ಎಂಬ ಪದ ಬಂದೇ ಬರುತ್ತದೆ. ಏಕೆಂದರೆ ಒಂದು ಸಮಯದಲ್ಲಿ ಗಾಂಧಿನಗರ ಸ್ಯಾಂಡಲ್‌ ವುಡ್‌ನ‌ ಮುಖ್ಯ ಚಟುವಟಿಕೆಯ ತಾಣ.

Advertisement

ಈ ಹೆಸರಿನಲ್ಲಿ ಈ ಹಿಂದೆ ಡಾ.ರಾಜ್‌ಕುಮಾರ್‌ ಅವರು “ಗಾಂಧಿನಗರ’ ಎಂಬ ಸಿನಿಮಾ ಮಾಡಿದ್ದರು. ಈಗ ಅದೇ ಹೆಸರಿನ ಹೊಸ ಚಿತ್ರವೊಂದು ಬರುತ್ತಿದೆ. ಎನ್‌ ಆರ್‌ ಫಿಲಂ ಇನ್ಸಿಟ್ಯೂಟ್‌ನ ರೂವಾರಿಯಾಗಿರುವ ಎಸ್‌.ಹೆಚ್‌ ನಾಗೇಶ್‌ ರೈತ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದೇ ಸಂಸ್ಥೆಯಲ್ಲಿ ಅಭಿನಯ ಕಲಿತಿರುವ ಬಾಲಾಜಿ ರಾವ್‌ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಎನ್‌ಆರ್‌ ಫಿಲಂ ಇನ್ಸಿಟ್ಯೂಟ್‌ನ ವಿದ್ಯಾರ್ಥಿಗಳೇ ಈ ಚಿತ್ರದ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. “ಚಿತ್ರರಂಗದ ಕಾರ್ಯಕ್ಷೇತ್ರವಾಗಿರುವ ಗಾಂಧಿನಗರಕ್ಕೂ ನಮ್ಮ ಚಿತ್ರ ಗಾಂಧಿನಗರ ಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಿರುದ್ಯೋಗ ಸಮಸ್ಯೆಯ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಚಿತ್ರ.

ದೇಶಕ್ಕೆ ಸ್ವತಂತ್ರ ತಂದುಕೊಟ್ಟ ಮಹಾತ್ಮ ಗಾಂಧಿ ಅವರ ಹೆಸರಿನ ಗಾಂಧಿನಗರ ಎಂಬ ಊರಿನಲ್ಲಿ ವಾಸವಿರುವ ವಿದ್ಯಾವಂತರು ಕೆಲಸ ಸಿಗದೆ ನಿರುದ್ಯೋಗಿಗಳಾಗಿದ್ದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಕಥಾ ಸಾರಾಂಶ. ಜೂನ್‌ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಲ್ಕು ಹಾಡುಗಳು ಹಾಗೂ ಮೂರು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ’ ಎನ್ನುವುದು ನಾಗೇಶ್‌ ರೈತ ಅವರ ಮಾತು.

Advertisement

Udayavani is now on Telegram. Click here to join our channel and stay updated with the latest news.

Next