Advertisement

ದೊಮ್ಮಸಂದ್ರಕ್ಕೆ ಗಾಂಧಿಗ್ರಾಮ ಪುರಸ್ಕಾರ

12:32 PM Oct 04, 2018 | |

ದೊಮ್ಮಸಂದ್ರ: ಆನೇಕಲ್‌ ತಾಲೂಕಿನ ದೊಮ್ಮಸಂದ್ರ ಗ್ರಾಪಂಯು 2017- 18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಪ್ರತಿನಿಧಿಗಳು ಪ್ರಶಸ್ತಿ ಸ್ವೀಕರಿಸಿದರು.

Advertisement

ಬೆಂಗಳೂರು ನಗರ ಜಿಲ್ಲೆ, ಆನೇಕಲ್‌ ತಾಲೂಕಿನ ದೊಮ್ಮಸಂದ್ರ ಗ್ರಾಪಂ, ಗ್ರಾಮೀಣಾ ಭಿವೃದ್ಧಿ, ಪಂಚಾಯತ್‌ ರಾಜ್‌ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿದೆ. ಗ್ರಾಪಂನ ಈ ಕಾರ್ಯವೈಖರಿ ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಇತ್ತೀಚೆಗೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೊಮ್ಮಸಂದ್ರ ಗ್ರಾ.ಪಂ ಅಧ್ಯಕ್ಷ ಬಿ.ಸಿ.ಉಮೇಶ್‌ ಬಾಬು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತ ಅವರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಸ್ವೀಕರಿಸಿದರು. ಪಂಚಾಯಿತಿಯ ಎಲ್ಲ ಸದಸ್ಯರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next