Advertisement

ಗಾಂಧಿ ಹೇಳಿಕೆ: ಹೆಗಡೆಗೆ ನೋಟಿಸ್‌

01:03 AM Feb 04, 2020 | Team Udayavani |

ಹೊಸದಿಲ್ಲಿ: ಗಾಂಧೀಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಉತ್ತರ ಕನ್ನಡ ಸಂಸದ ಅನಂತ
ಕುಮಾರ್‌ ಹೆಗಡೆಗೆ ಬಿಜೆಪಿ ಹೈಕಮಾಂಡ್‌ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ಹೇಳಿಕೆಗೆ ತೀವ್ರ ಆಕ್ಷೇಪಿಸಿರುವ ಬಿಜೆಪಿ ನಾಯಕರು, ವಿವರಣೆ ಕೋರಿ ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹೇಳಿದ್ದಾರೆ.

Advertisement

ಹೆಗಡೆ ಹೇಳಿಕೆಯಿಂದಾಗಿ ಕಾಂಗ್ರೆಸ್‌ ಸಹಿತ ಪ್ರಮುಖ ವಿಪಕ್ಷಗಳೆಲ್ಲ ಬಿಜೆಪಿ ಮೇಲೆ ಸೋಮವಾರ ಮುಗಿಬಿದ್ದಿವೆ. ಅವರ ವಿರುದ್ಧ ದೇಶದ್ರೋಹ ಕೇಸು ದಾಖಲಿಸಬೇಕು ಮತ್ತು ಸಂಸತ್‌ನಲ್ಲಿ ಪ್ರಧಾನಿ ಮೋದಿ ಕ್ಷಮೆ ಕೋರಬೇಕು ಎಂದೂ ಅವು ಆಗ್ರಹಿಸಿವೆ.

ಅತ್ತ ಹೆಗಡೆ ಅವರ ಹೇಳಿಕೆ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರೇ ಬೇಸರಗೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ ನಡೆಯಲಿರುವ ಬಿಜೆಪಿ ಸಂಸದೀಯ ಪಕ್ಷದ ಮಂಡಳಿ ಸಭೆಯಲ್ಲಿ ಮೋದಿ ಮಾತನಾಡುವ ಸಾಧ್ಯತೆ ಇದೆ ಎಂದವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next