Advertisement

ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಗಣೇಶ್‌

08:42 AM Mar 30, 2019 | Vishnu Das |

ಬೆಂಗಳೂರು: ಶಾಸಕ ಆನಂದ್‌ ಸಿಂಗ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ಜಾಮೀನು ಕೋರಿ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಪ್ರಕರಣದಲ್ಲಿ ಗಣೇಶ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ.25ರಂದು ವಜಾಗೊಳಿಸಿತ್ತು. ಇದೀಗ ಅವರು ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್‌ ಸಿಂಗ್‌ ಕುಟುಂಬದವರು ನೀಡಿರುವ ದೂರಿನಲ್ಲಿ ಮಧ್ಯರಾತ್ರಿ 1 ಗಂಟೆಗೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಆದರೆ, ಪೊಲೀಸರ ದಾಖಲೆಗಳ ಪ್ರಕಾರ ಬೆಳಗಿನ ಜಾವ 4 ಗಂಟೆಗೆ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಅಲ್ಲದೆ, ಘಟನೆ ಸಂಬಂಧತನಿಖಾಧಿಕಾರಿ ಗಳು ಕೆಲವು ಸತ್ಯ ಸಂಗತಿಗಳನ್ನು ಮರೆ ಮಾಚಿದ್ದಾರೆ. ಪೊಲೀಸರ ವಾದದಲ್ಲಿ ಸತ್ಯಾಂಶ ಇಲ್ಲದ ಕಾರಣ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next