Advertisement

ಡೊಂಬಿವಲಿ ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌: ಗಣೇಶ ಚತುರ್ಥಿ ಆಚರಣೆ

02:39 PM Sep 12, 2021 | Team Udayavani |

ಡೊಂಬಿವಲಿ: ಡೊಂಬಿವಲಿ ಪಶ್ಚಿಮದ ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌ ವತಿಯಿಂದ ಧಾರ್ಮಿಕ ಕಾರ್ಯಕ್ರಮವಾಗಿ ಗಣೇಶ ಚತುರ್ಥಿ ಆಚರಣೆಯು ಸೆ. 10ರಂದು ಅಪರಾಹ್ನ ಸಂಘದ ಕಚೇರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸರಳವಾಗಿ ನೆರವೇರಿತು.

Advertisement

ಧಾರ್ಮಿಕ ಕಾರ್ಯಕ್ರಮವಾಗಿ ಪ್ರಾರಂಭದಲ್ಲಿ ಸಂಸ್ಥೆಯ ಸದಸ್ಯರು ಮತ್ತು ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮವನ್ನು ಆಯೋಜಿ ಸಲಾಗಿತ್ತು. ಪೂಜಾ ವಿಧಿ-ವಿಧಾನಗಳಲ್ಲಿ ಅಸೋಸಿಯೇಶನ್‌ನ ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ, ಶಕುಂತಲಾ ಸಾಲ್ಯಾನ್‌, ಅಶೋಕ್‌ ಅಮೀನ್‌ ಸಹಕರಿಸಿದರು.

ಸಂಘದ ಅಧ್ಯಕ್ಷ ಆರ್‌. ಕೆ. ಸುವರ್ಣ ಮಹಾ ಮಂಗಳಾರತಿಗೈದರು. ಸಲಹೆಗಾರ ವಸಂತ ಸುವರ್ಣ ಪ್ರಾರ್ಥ ನೆಗೈದರು. ಧಾರ್ಮಿಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ದಾನಿಗಳ ಯಾದಿಯನ್ನು ಜತೆ ಕೋಶಾಧಿಕಾರಿ ಕೆ. ಕೆ. ಸಾಲ್ಯಾನ್‌ ವಾಚಿಸಿ ದರು. ದಾನಿಗಳನ್ನು ಪ್ರಸಾದವನ್ನಿತ್ತು ಗೌರವಿಸಲಾಯಿತು.

ಇದನ್ನೂ ಓದಿ:ಲಂಕೆಯೊಳಗೆ ಮಾಸ್‌ ಮಿಂಚು

ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸಮಾಜ ಸೇವಕ ಕೃಷ್ಣ ಪಾಟೀಲ್‌ ಮೊದಲಾದವರು ಉಪಸ್ಥಿತರಿದ್ದರು. ಗೌರವ ಪ್ರಧಾನ ಕಾರ್ಯದರ್ಶಿ ವಿಟuಲ್‌ ಅಮೀನ್‌ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next