Advertisement

Udupi ಕರಾವಳಿಯಾದ್ಯಂತ ಸಂಭ್ರಮದ ಗಣೇಶ ಚತುರ್ಥಿ

12:07 AM Sep 21, 2023 | Team Udayavani |

ಉಡುಪಿ/ಮಂಗಳೂರು: ನಾಡಿನಾದ್ಯಂತ ನಡೆದ ಗಣೇಶ ಚತುರ್ಥಿಯಂದು ಅಪಾರ ಸಂಖ್ಯೆಯಲ್ಲಿ ಭಕ್ತರು ವಿವಿಧ ದೇವಸ್ಥಾನಗಳು, ಸಾರ್ವಜನಿಕ ಗಣೇಶೋತ್ಸವದ ಪೆಂಡಾಲಿಗೆ ತೆರಳಿ ಪ್ರಸಾದ ಸ್ವೀಕರಿಸಿದರು.

Advertisement

ಬುಧವಾರವೂ ಸಾರ್ವಜನಿಕ ಗಣೇಶೋತ್ಸವ ಕೇಂದ್ರಗಳಿಗೆ ಭಕ್ತರು ಭೇಟಿ ನೀಡಿದರು. ದೇವಸ್ಥಾನಗಳು, ಪೆಂಡಾಲುಗಳಲ್ಲಿ 108, 1,008 ಗಣಪತಿ ಹೋಮ, ಮೂಡುಗಣಪತಿ ಸೇವೆಗಳು ನಡೆದವು.

ಗಣಪತಿ ದೇವಸ್ಥಾನಗಳಲ್ಲದೆ ಇತರ ದೇವಸ್ಥಾನಗಳಲ್ಲಿ, ವಿವಿಧ ಮಠಗಳಲ್ಲಿಯೂ ಸಂಪ್ರದಾಯದಂತೆ ಗಣಪತಿ ವಿಗ್ರಹವನ್ನು ಇರಿಸಿ ಪೂಜಿಸಲಾಯಿತು. ದ.ಕ. ಜಿಲ್ಲೆಯ ಶರವು, ಸೌತಡ್ಕ, ಕಾಸರಗೋಡು ಜಿಲ್ಲೆಯ ಮಧೂರು, ಉಡುಪಿ ಜಿಲ್ಲೆಯ ಆನೆಗುಡ್ಡೆ, ಹಟ್ಟಿಯಂಗಡಿ, ಗುಡ್ಡಟ್ಟು, ಪೆರ್ಣಂಕಿಲ, ಬಾರಕೂರು ಬಟ್ಟೆವಿನಾಯಕ, ಉದ್ಯಾವರ, ಉಪ್ಪೂರು, ಪಡುಬಿದ್ರಿ ದೇವಸ್ಥಾನ, ಹಿರಿಯಡಕ ಪುತ್ತಿಗೆಯ ಸ್ತಂಭೋದ್ಭವ ಗಣಪತಿ ಸನ್ನಿಧಿಗಳಲ್ಲಿ ಜನಸಂದಣಿ ಇತ್ತು. ವಿವಿಧ ದೇವಸ್ಥಾನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಪ್ಪ, ಅಷ್ಟದ್ರವ್ಯ ಪಂಚಕಜ್ಜಾಯ, ಕಡಲೆಬೇಳೆ ಪಂಚಕಜ್ಜಾಯ, ಲಡ್ಡು, ಮೋದಕ, ಕೊಟ್ಟೆ ಕಡುಬು ದೇವರಿಗೆ ಸಮರ್ಪಿಸಿದ್ದು, ಬಳಿಕ ಭಕ್ತರು ಸ್ವೀಕರಿಸಿದರು.
ವಿವಿಧ ದೇವಸ್ಥಾನಗಳಲ್ಲಿ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಗಣಪತಿ ಹೋಮಗಳು, ಮುಡಿಅಕ್ಕಿ ಕಡುಬು, ಮೂಡುಗಣಪತಿ ಸೇವೆಗಳು, ರಾತ್ರಿ ಹೂವಿನ ಪೂಜೆ ನಡೆದವು. ಮನೆಗಳಲ್ಲಿ ಗಣಪತಿ ವಿಗ್ರಹವಿಟ್ಟು ಪೂಜಿಸುವವರು ಮೊದಲ ದಿನವೇ ಜಲಸ್ತಂಭನ ಮಾಡಿದರು. ಹಲವು ಗಣೇಶೋತ್ಸವ ಪೆಂಡಾಲುಗಳಲ್ಲಿಯೂ ಮೊದಲ ದಿನವೇ ಜಲಸ್ತಂಭನ ಮಾಡಲಾಯಿತು. ಮಂಗಳವಾರ ಆಗಾಗ್ಗೆ ಮಳೆ ಸುರಿದಿತ್ತಾದರೂ ಹಬ್ಬದ ಸಂಭ್ರಮಕ್ಕೆ ತೊಡಕಾಗಲಿಲ್ಲ.

ಸಣ್ಣ ಗಣಪತಿಯ ದೇವಸ್ಥಾನಗಳಲ್ಲಿಯೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಕಂಡುಬಂದರು. ಉಡುಪಿ ಜಿಲ್ಲೆಯಲ್ಲಿ 470 ಮತ್ತು ದ.ಕ. ಜಿಲ್ಲೆಯಲ್ಲಿ 381 ಗಣೇಶೋತ್ಸವಗಳು ಸಂಪನ್ನಗೊಂಡಿತು. ಕೆಲವೆಡೆ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next