Advertisement

Ganesh Chaturthi ಪೋಸ್ಟ್‌ ಡಿಲೀಟ್‌: ಪ್ರಾಂಶುಪಾಲ ಸೆರೆ

01:55 AM Sep 09, 2024 | Team Udayavani |

ಕೋಟಾ: ಗಣೇಶ ಚತುರ್ಥಿಯ ಪ್ರಯುಕ್ತ ಶಾಲಾ ಅಭಿವೃದ್ಧಿ ಸಮಿತಿಯ ವಾಟ್ಸಾಪ್‌ ಗುಂಪಿನಲ್ಲಿ ಹಂಚಿಕೊಳ್ಳಲಾಗಿದ್ದ ಎರಡು ಪೋಸ್ಟ್‌ಗಳನ್ನು ಅಳಿಸಿದ ಆರೋಪದ ಮೇರೆಗೆ ರಾಜ ಸ್ಥಾನದ ಕೋಟಾದ ಸರಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ವಾಟ್ಸಾಪ್‌ ಗುಂಪಿನ ಸದಸ್ಯರು ಹಬ್ಬದ ಪ್ರಯುಕ್ತ ಪರಸ್ಪರ ಶುಭಕಾಮನೆ ಕೋರುತ್ತಿದ್ದ ಸಂದರ್ಭದಲ್ಲಿ ಪ್ರಾಂಶುಪಾಲ ಮೊಹಮ್ಮದ್‌ ಶಫೀಕ್‌ ಪೋಸ್ಟ್‌ಗಳನ್ನು ಅಳಿಸಿದ್ದಾರೆ ಎಂದು ಆರೋಪಿಸಿಲಾಗಿದೆ. ಘಟನೆಯ ಬೆನ್ನಲ್ಲೇ ಜನರ ಗುಂಪು ಶಾಲೆಯ ಬಳಿ ಧಾವಿಸಿ ಪ್ರಾಂಶುಪಾಲರ ವಿರುದ್ಧ ಪ್ರತಿಭಟಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next