Advertisement

ಗಣೇಶ ಅಭಿಮಾನಿ ಸಂಘ: ಶ್ರೀ ಸತ್ಯನಾರಾಯಣ ಮಹಾಪೂಜೆ

05:06 PM Jun 13, 2019 | Team Udayavani |

ಮುಂಬಯಿ: ಗಣೇಶ ಅಭಿಮಾನಿ ಸಂಘ ಮುಂಬಯಿ ಇದರ ಐದನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಸಯಾನ್‌ನ ಜಿಎಸ್‌ಬಿ ಸೇವಾ ಮಂಡಲದ ಶ್ರೀ ಗುರುಗಣೇಶ ಪ್ರಸಾದ್‌ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

Advertisement

ಈ ಸಂಘದ ಸದಸ್ಯರು ಮುಂಬಯಿ ಖ್ಯಾತ ಜಿಎಸ್‌ಬಿ ಸೇವಾ ಮಂಡಲದ ವಾರ್ಷಿಕ ಗಣೇಶೋತ್ಸವ ಸಮಾರಂಭದಲ್ಲಿ ಸ್ವಯಂ ಸೇವಕರಾಗಿ ಕಳೆದ ಮೂವತ್ತಕ್ಕೂ ಅಧಿಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗಿನ ಕೆಲವು ವರ್ಷಗಳಿಂದ ಸಂಘದ ಕಾರ್ಯವ್ಯಾಪ್ತಿ ವಿಸ್ತೃತಗೊಳಿಸಿ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಇನ್ನಿತರ ಸಮಾಜಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ.

ಇದೇ ಸಂದರ್ಭದಲ್ಲಿ ಸಮಾಜದ ಆರ್ಥಿಕವಾಗಿ ಹಿಂದುಳಿದ 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಯಿತು. ಮೂಲ್ಕಿ ಪ್ರಶಾಂತ್‌ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಇನ್ನಿತರ ಪೂಜಾ ಕೈಂಕರ್ಯಗಳು ನಡೆದವು.

ವಿವಿಧ ಪೂಜಾ ಕೈಂಕರ್ಯಗಳ ಯಜಮಾನತ್ವವನ್ನು ಗುರುದತ್‌ ದಂಪತಿ ವಹಿಸಿದ್ದರು. ಮುನ್ನೂರೈವತ್ತಕ್ಕೂ ಅಧಿಕ ಸಮಾಜ ಬಾಂಧವರು ತೀರ್ಥ ಪ್ರಸಾದ ಸ್ವೀಕರಿಸಿ ಸಮಾರಾಧನೆಯಲ್ಲಿ ಪಾಲ್ಗೊಂಡರು. ಸಮಾರಂಭದಲ್ಲಿ ಗಣೇಶ ಅಭಿಮಾನಿ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಸಂತೋಷ್‌ ಏಕನಾಥ್‌ ನಾಯಕ್‌, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ವಾಮನ ನಾಯಕ್‌, ಗೌರವ ಕೋಶಾಧಿಕಾರಿಯಾಗಿ ನಾಗೇಶ್‌ ಶೆಣೈ ಅವರನ್ನು ನೇಮಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next