Advertisement

ಪುನೀತ್ ದೆಸೆಯಿಂದಾದರೂ ಹಂಸಲೇಖರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ: ಗಣೇಶ್ ಕಾರ್ಣಿಕ್

01:56 PM Nov 16, 2021 | Team Udayavani |

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಮಾತನಾಡಿದ ಹಂಸಲೇಖ ಅವರಿಗೆ ಟೀಕೆ ಕೆಟ್ಟ ಚಾಳಿ. ಇಷ್ಟೊಂದು ಕೀಳು ಮಟ್ಟಕ್ಕೆ ಹಂಸಲೇಖ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ಇಡೀ ಹಿಂದೂ ಸಮಾಜ ಹಂಸಲೇಖ‌ ಅವರ ಹೇಳಿಕೆ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ವಕ್ತಾರಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಮೂಲಕ‌ ಹಂಸಲೇಖ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. ಪುನೀತ್ ರಂಥಹ ಸೆಲೆಬ್ರಿಟಿ ಎಲೆಮರೆ ಕಾಯಿಯಾಗಿ ಸೇವೆ ಮಾಡಿದ್ದರು. ಪುನೀತ್ ರಾಜ್ ಕಮಾರ್ ಅವರ ದೆಸೆಯಿಂದಾದರೂ ಹಂಸಲೇಖರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಹೇಳಿದರು.

ಇದನ್ನೂ ಓದಿ:ಬಿಟ್ ಕಾಯಿನ್ ಹಗರಣದಿಂದ ಪ್ರಿಯಾಂಕ್ ಖರ್ಗೆ ಕಪ್ಪುಹಣ ಪಡೆದಿದ್ದಾರೆ: ಗಣೇಶ್ ಕಾರ್ಣಿಕ್ ಆರೋಪ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕ್ತಾರ ಎಂ.ಜಿ ಮಹೇಶ್, ಹಂಸಲೇಖ ಅವರು  ಹಿಂದೂ ಧರ್ಮಗುರುಗಳ ವಿರುದ್ಧ ಹೇಳಿಕೆ ನೀಡಿದ್ದಾರೆ. ಬಿಳಿಗಿರಿ ರಂಗ ದೇವರನ್ನು ಅವಹೇಳನ ಮಾಡಿದ್ದಾರೆ. ಈ ರೀತಿಯ ಹೇಳಿಕೆ ನೀಡುವ ಮೂಲಕ, ಕೆಟ್ಟ ಪ್ರಚಾರಕ್ಕೆ ತುತ್ತಾಗಿದ್ದಾರೆ. ಇದೇ ರೀತಿ ಅವರು ಮುಂದುವರೆದರೆ ಕಾಲದ ದಿನದಲ್ಲಿ ಮರೆಯಾಗುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next