Advertisement

ಗಂಗಾವತಿ: ವೈಭವಯುತವಾಗಿ 5 ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ

09:06 AM Sep 22, 2022 | Team Udayavani |

ಗಂಗಾವತಿ: ಗಣೇಶ ಚತುರ್ಥಿ ನಿಮಿತ್ತ ಪ್ರತಿಷ್ಠಾಪನೆಯಾಗಿದ್ದ 5 ಗಣೇಶನ ಮೂರ್ತಿಗಳನ್ನು ಬುಧವಾರ ಸಂಜೆ ವಿಸರ್ಜನೆ ಮಾಡಲಾಯಿತು. ಗಂಗಾವತಿಯ ಮಹಾರಾಜ ಎಂದೇ ಖ್ಯಾತಿ ಪಡೆದ ವಿಜಯ ವೃಂದ   ಗಣೇಶನ ವಿಸರ್ಜನಾ ಮೆರವಣಿಗೆಗೆ ಮಾಜಿ ಸಂಸದ ಹಿರಿಯ ಮುಖಂಡ ಎಚ್ .ಜಿ. ರಾಮುಲು ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಅವರು, ಹಬ್ಬ ಹರಿದಿನಗಳು ಶಾಂತಿ ಮತ್ತು ಐಕ್ಯತೆಯ ಧ್ಯೋತಕವಾಗಿವೆ. ಆದ್ದರಿಂದ ಗಣೇಶ ಹಬ್ಬವನ್ನು ವೈಭವಯುತವಾಗಿ ಆಚರಣೆ ಮಾಡಿ ಶಾಂತಿಯುತವಾಗಿ ವಿಸರ್ಜನಾ ಮೆರವಣಿಗೆ ಜರುಗುವಂತಾಗಲಿ ಎಂದು ಯುವಕರಿಗೆ ಕರೆ ನೀಡಿದರು.

ಬುಧವಾರ ಸಂಜೆ ಗಾಂಧಿನಗರ, ಲಿಂಗರಾಜ ಕ್ಯಾಂಪ್, ಪ್ರಶಾಂತ ನಗರ, ಸಿಬಿಎಸ್ ಗಂಜ್ ಗಣೇಶನ ಮೂರ್ತಿಗಳು ವಿಸರ್ಜನೆಗೊಂಡವು. ಸಂಜೆ 6 ಗಂಟೆಗೆ ಆರಂಭವಾದ ವಿಸರ್ಜನಾ ಮೆರವಣಿಗೆ ಗುರುವಾರ ಬೆಳಗಿನ ಜಾವ 5 ಗಂಟೆ ವರೆಗೂ ಜರುಗಿತು. ಬಳಿಕ ತಾಲೂಕಿನ ದಾಸನಾಳ ಕಾಲುವೆಯಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಹಾಗೂ ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ವರ್ಗದವರು ಮೆರವಣಿಗೆಗೆ ಭದ್ರತೆ ಕಲ್ಪಿಸಿದ್ದರು .5 ಡಿಜೆಗಳಲ್ಲಿ ಯುವಕರು ಕುಣಿದು ಕುಪ್ಪಳಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಮೆರವಣಿಗೆಯನ್ನು ವೀಕ್ಷಣೆ ಮಾಡಲು ಮಹಿಳೆಯರು ಮಕ್ಕಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next