Advertisement

ದ.ಕ.ಜಿಲ್ಲೆಯಲ್ಲಿ ಸರಳ ಗಣೇಶೋತ್ಸವ: ಇಂದು ಪರಿಷ್ಕೃತ ಆದೇಶ ಪ್ರಕಟ

01:34 AM Sep 07, 2021 | Team Udayavani |

ಮಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ದ. ಕ. ಜಿಲ್ಲೆಗೆ ಸಂಬಂಧಪಟ್ಟು  ನಿಯಮಗಳಲ್ಲಿ ಕೆಲವು ಬದಲಾವಣೆಗಳೊಂದಿಗೆ  ಸರಳ ಗಣೇಶೋತ್ಸವಕ್ಕೆ ಅನುಮತಿ ನೀಡಲು ನಿರ್ಧರಿಸಲಾಗಿದ್ದು  ಈ  ಕುರಿತು ಸೆ. 7ರಂದು  ಪರಿಷ್ಕೃತ ಆದೇಶ ಹೊರಬೀಳಲಿದೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ  ಸೋಮವಾರ ಜರಗಿದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ (ಡಿಡಿಎಂಎ)ದ ಸಭೆಯಲ್ಲಿ  ಈ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯ ಸರಕಾರದ ಮಾರ್ಗಸೂಚಿಯಲ್ಲಿ  ಕೆಲವು ಬದಲಾವಣೆ ಗಳೊಂದಿಗೆ ಕಳೆದ ವರ್ಷದ ರೀತಿಯಲ್ಲೇ  ಸರಳ ರೀತಿಯ ಗಣೇಶೋತ್ಸವ ಆಚರಣೆಗೆ ಸಂಬಂಧಪಟ್ಟು  ಮಂಗಳವಾರ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಡಿಸಿ ಡಾ| ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗಣೇಶೋತ್ಸವ ಮೂರು ದಿನಗಳಿಗೆ ಸೀಮಿತ. ಮೈದಾನಗಳು ಸೇರಿದಂತೆ  ಸಾರ್ವಜನಿಕ ಸ್ಥಳಗಳಲ್ಲಿ  ಶಾಮಿಯಾನ, ಪೆಂಡಾಲ್‌ ಹಾಕಿ ಸಾರ್ವಜನಿಕ ಗಣೇಶೋತ್ಸವ‌ಕ್ಕೆ ನಿರ್ಬಂಧ ಸಹಿತ ಕೆಲವು ನಿರ್ಧಾರಗಳನ್ನು ಸಭೆಯಲ್ಲಿ   ಕೈಗೊಳ್ಳಲಾಗಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next