Advertisement

ಭಕ್ತರ ಭಾರ ತಾಳದೇ ನೆಲಕ್ಕುರುಳಿದ ಗಣೇಶ ಮಂಟಪ: ಹಲವರಿಗೆ ಗಾಯ

11:07 PM Sep 03, 2022 | Team Udayavani |

ವಿಜಯಪುರ : ದರ್ಶನಕ್ಕೆ ಭಕ್ತರ ಭಾರ ತಾಳದೇ ಜಿಲ್ಲೆಯ ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು, ಹಲವರಿಗೆ ಗಾಯಗಳಾದ ಘಟನೆ ಸಿಂದಗಿ ಪಟ್ಟಣದಲ್ಲಿ ಶನಿವಾರ ಸಂಭವಿಸಿದೆ.

Advertisement

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಗೋಪುರ ಸಹಿತ ಸ್ವರ್ಣ ವರ್ಣದ ದೇವಾಲಯ ಮಾದರಿಯಲ್ಲಿ ಗಣೇಶೋತ್ಸವ ಮಂಟಪ ನಿರ್ಮಿಸಲಾಗಿತ್ತು.

ಸದರಿ ಗಣೇಶ ಮಂಟಪ ಇದೇ ಕಾರಣಕ್ಕೆ ಜನಾಕರ್ಷಣೆಗೆ ಕಾರಣವಾಗಿತ್ತು. ಆಕರ್ಷಕ ಅಲಂಕೃತ ಮಂಟಪ ವೀಕ್ಷಿಸಲು ಶನಿವಾರ ಭಾರಿ ಸಂಖ್ಯೆಯಲ್ಲಿ ಜನ ಜಂಗುಳಿಯ ಮಂಟಪಕ್ಕೆ ಆಗಮಿಸಿತ್ತು. ಇದರಿಂದ ಭಾರ ತಾಳದೇ ದೇವಾಲಯ ಮಾದರಿ ಮಂಟಪ ನೆಲಕ್ಕೆ ಉರುಳಿ ಬಿದ್ದಿದೆ.

ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಸಿಂದಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ನೆಲಕ್ಕುರುಳಿದ್ದ ಮಂಟಪದ ಅಡಿಯಲ್ಲಿ ಸಿಲುಕಿ ಅಪಾಯದಲ್ಲಿ ಇದ್ದವರನ್ನು ಪಾರು ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next