Advertisement

Rape: ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ

09:31 PM Sep 02, 2023 | Team Udayavani |

ರಾಯ್ಪುರ: ರಕ್ಷಾಬಂಧನದ ಸಂಭ್ರಮ ಮುಗಿಸಿಕೊಂಡು ಹಿಂತಿರುಗುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಕ ಸಹೋದರಿಯರ ಮೇಲೆ, ಹತ್ತು ಮಂದಿಯ ಗುಂಪೊಂದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಛತ್ತೀಸಗಢದ ರಾಯು³ರದಲ್ಲಿ ನಡೆದಿದೆ. ಇಬ್ಬರು ಬಾಲಕಿಯರು ತಮ್ಮ ಸಂಬಂಧಿಯೊಂದಿಗೆ ಮನೆಗೆ ಮರಳುತ್ತಿದ್ದರು. ಈ ವೇಳೆ ಅವರನ್ನು ಅಡ್ಡಹಾಕಿದ ಮೂವರು ಆರೋಪಿಗಳು, ಅವರಿಂದ ಮೊಬೈಲ್‌ ಮತ್ತು ನಗದನ್ನು ದರೋಡೆ ಮಾಡಿದ್ದಾರೆ.

Advertisement

ನಂತರ ನಾಲ್ಕು ಬೈಕ್‌ಗಳಲ್ಲಿ ಉಳಿದ 7 ಮಂದಿ ಆರೋಪಿಗಳು ಸ್ಥಳಕ್ಕೆ ಬಂದಿದ್ದಾರೆ. ಬಾಲಕಿಯರ ಸಂಬಂಧಿ ಪುರುಷನನ್ನು ಆರೋಪಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಇಬ್ಬರು ಬಾಲಕಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆ ಸಂಬಂಧ ಸ್ಥಳೀಯ ಬಿಜೆಪಿ ನಾಯಕನ ಪುತ್ರ ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪೂನಂ ಠಾಕೂರ್‌ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾನೆ. ಈತ ಸ್ಥಳೀಯ ನಾಯಕ ಲಕ್ಷ್ಮೀ ನಾರಾಯಣ ಸಿಂಗ್‌ ಪುತ್ರನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next