Advertisement

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

06:00 AM Mar 07, 2018 | |

ನಾಲತವಾಡ (ವಿಜಯಪುರ): ವಿಜಯಪುರದಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಮತ್ತೂಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಂಗಳವಾರ ನಡೆದಿದೆ.

Advertisement

ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ನಾಗಬೇನಾಳ ಗ್ರಾಮದ ಬಾಳೆತೋಟದಲ್ಲಿ ನಾರಾಯಣಪುರ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಂಗಳವಾರ
ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬಾಲಕಿಯನ್ನು ಗುಂಪೊಂದು ಬಾಳೆ ತೋಟದಲ್ಲಿ ಹೊತ್ತೂಯ್ದು ಅತ್ಯಾಚಾರವೆಸಗಿದೆ. ಬಾಲಕಿಯ ಕಿರುಚಾಟವನ್ನು ಬಾಳೆ ತೋಟದ ಪಕ್ಕದಲ್ಲೇ ವಾಸಿಸುತ್ತಿದ್ದ ಸಂತ್ರಸ್ತ ಬಾಲಕಿಯ ತಂದೆ ಗಮನಿಸಿದ್ದಾನೆ. ಬಾಲಕಿ ತಂದೆ
ಬರುವುದನ್ನು ಕಂಡ ಗುಂಪಿನ ಮೂವರು ತಪ್ಪಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ ವೀರೇಶ ಕಂದಗಲ್‌ ಎಂಬಾತ ಸಿಕ್ಕಿ ಬಿದ್ದಿದ್ದು, ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಅತ್ಯಾಚಾರ ಖಂಡಿಸಿ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next