Advertisement

ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರ್ಕಾರವೇ ಉಳಿಯಲ್ಲ: ಗಂಗಾಧರ್ ಕುಲಕರ್ಣಿ

12:35 PM Nov 08, 2021 | Team Udayavani |

ಚಿಕ್ಕಮಗಳೂರು: ಯಡಿಯೂರಪ್ಪಗೆ ಅಧಿಕಾರ ಕಳೆದುಕೊಳ್ಳುತ್ತೀರಾ ಎಂದು ಹೇಳಿದ್ದೆ. ಅದಾಗಿ ಒಂದೇ ವರ್ಷಕ್ಕೆ ಯಡಿಯೂರಪ್ಪ ಅಧಿಕಾರ ಕಳೆದುಕೊಂಡರು. ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರ್ಕಾರವೇ ಉಳಿಯಲ್ಲ ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹೇಳಿದರು.

Advertisement

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಒಂದೇ ತಿಂಗಳಿಗೆ ದತ್ತಪೀಠ ಹಿಂದೂಗಳಿಗೆ ಎಂದು ಹೇಳಿದ್ದಿರಿ. ಅಧಿಕಾರಕ್ಕೆ ಬಂದು ಎರಡು ಮೂರು ವರ್ಷವಾದರೂ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಿಲ್ಲ. ತಕ್ಷಣವೇ ಬಾಯಿ ಮುಚ್ಚಿಕೊಂಡು ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ರಾಜಕಾರಣ ಏನಾದರೂ ಮಾಡಿಕೊಳ್ಳಿ, ಧರ್ಮ-ಗುರುಗಳ ಜೊತೆ ಹುಡುಗಾಟ ಒಳ್ಳೆಯದಲ್ಲ. ಸಮಿತಿ ಮಾಡುವ ಅಗತ್ಯವೇನಿದೆ, ಕೋರ್ಟ್ ಕೊಟ್ಟ ತೀರ್ಪಿಗೆ ಕಿಮ್ಮತ್ತಿಲ್ಲವೇ ಎಂದು ದತ್ತಮಾಲಾಧಾರಣೆ ಬಳಿಕ ಗಂಗಾಧರ್ ಕುಲಕರ್ಣಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next