Advertisement

ಗಂಗಾರಾಮ್‌ ಬಡೇರಿಯಾಗೆ ಷರತ್ತುಬದ್ಧ ಜಾಮೀನು

11:11 AM Jun 03, 2017 | Team Udayavani |

ಬೆಂಗಳೂರು: ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಹಿರಿಯ ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ ಅವರಿಗೆ ನಗರದ ಗಣಿ ಪ್ರಕರಣಗಳ ವಿಶೇಷ ನ್ಯಾಯಾಲಯ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 

Advertisement

ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮೇ 15ರಂದು ಗಂಗಾರಾಮ್‌ ಬಡೇರಿಯಾ ಅವರನ್ನು ಬಂಧಿಸಿ ವಿಚಾರಣೆ ಪೂರ್ಣಗೊಳಿಸಿದ್ದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಹೀಗಾಗಿ ಆರೋಪಿ ಗಂಗಾರಾಮ್‌ ಬಡೇರಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಗಣಿ ಪ್ರಕರಣಗಳ ವಿಶೇಷ ನ್ಯಾಯಾಲಯ, 5 ಲಕ್ಷ ರೂ. ಬಾಂಡ್‌, ನ್ಯಾಯಾಲಯದ ಅನುಮತಿ ಇಲ್ಲದೇ ವಿದೇಶಕ್ಕೆ ತೆರಳಬಾರದು. ಪಾಸ್‌ಪೋರ್ಟ್‌ ನ್ಯಾಯಾಲಯದ ವಶಕ್ಕೆ ನೀಡಬೇಕು. ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next